ಬೆಂಗಳೂರು: ಲಭ್ಯ ಸಂಪನ್ಮೂಲದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ನ್ಯಾಯ ವಿಜ್ಞಾನ ಪ್ರಯೋಗಾಲಯ ಸಿಬ್ಬಂದಿಗಳು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಹತ್ತರ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರರವರು ತಿಳಿಸಿದ್ದಾರೆ.
ಸಚಿವರು ಇಂದು, ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ವೈಜ್ಞಾನಿಕ, ತಾಂತ್ರಿಕ ಹಾಗೂ ಇತರ ಸಿಬ್ಬಂದಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ರಾಜ್ಯದಲ್ಲಿ, ಅಪರಾಧ ಸಾಬೀತು ಪಡಿಸಿ ಅಪರಾಧಿಗಳಿಗೆ ಶಿಕ್ಷೆ ಕೊಡಿಸುವುದರಲ್ಲಿ ತಮ್ಮ ಪಾತ್ರ ಮಹತ್ತರವಾಗಿದೆ ಎಂದ ಸಚಿವರು ” ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ, ನ್ಯಾಯ ವಿತರಣೆ ಹಾಗೂ ನೆಮ್ಮದಿ ಕಾಪಾಡುವಲ್ಲಿ ನಿಮ್ಮದೂ ಕಾಣಿಕೆ ಇದೆ” ಎಂದರು.
ನಮ್ಮ ಸರಕಾರದ ಅವಧಿಯಲ್ಲಿ, ನ್ಯಾಯ ಪ್ರಯೋಗಾಲಯ ಗಳ ಬಲವರ್ಧನೆಗೆ ಆದ್ಯತೆ ನೀಡಿದ್ದು, ಮಾನವ ಸಂಪನ್ಮೂಲ ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದರು.
ಸಿಬ್ಬಂದಿಗಳ ಕುಂದು ಕೊರತೆಗಳ ಬಗ್ಗೆಯೂ ಪ್ರತಿಕ್ರಿಯಿಸಿದ ಸಚಿವರು, ವಸತಿ ಸೌಲಭ್ಯ ಒದಗಿಸುವ ಹಾಗೂ ಹುದ್ದೆ ಹಾಗೂ ನೇಮಕಾತಿ ಸಂಬಂಧ ಇರಬಹುದಾದ ಆಡಳಿತಾತ್ಮಕ ಸಮಸ್ಯೆಗಳನ್ನು ನಿವಾರಿಸುವ ಭರವಸೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.