ಬೆಂಗಳೂರು: ಹಿಜಾಬ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್ ಬುಧವಾರ ಇಡೀ ಪ್ರಕರಣದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ಐ) ಪಾತ್ರದ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ಕೇಳಿದೆ.
ಜನವರಿ 1ರಂದು ಕಾಲೇಜುಗಳಲ್ಲಿ ಹಿಜಾಬ್ ಹಾಕಲು ಅವಕಾಶ ನೀಡಿದೇ ಇರುವುದನ್ನು ಖಂಡಿಸಿ ಸಿಎಫ್ಐ ಪತ್ರಿಕಾಗೋಷ್ಠಿ ನಡೆಸಿದ್ದು ಇದರಲ್ಲಿ ಉಡುಪಿ ಕಾಲೇಜಿನ ಆರು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಇದಾದ ನಾಲ್ಕು ದಿನಗಳ ನಂತರ ಈ ವಿದ್ಯಾರ್ಥಿನಿಯರು ತರಗತಿಗಳಲ್ಲಿ ಹಿಜಾಬ್ ಧರಿಸಲು ಅನುಮತಿಯನ್ನು ಕೋರಿದ್ದರು. ಆದರೆ ಕಾಲೇಜಿನಲ್ಲಿ ಅದಕ್ಕೂ ಮೊದಲು ಅವಕಾಶವಿರಲಿಲ್ಲ, ಈಗಲೂ ಅವಕಾಶ ನೀಡುವುದಿಲ್ಲ ಎಂದು ಪ್ರಾಂಶುಪಾಲರು ಹೇಳಿದ್ದಾರೆ. ಅಲ್ಲಿಯವರೆಗೆ ವಿದ್ಯಾರ್ಥಿಗಳು ಸ್ಕಾರ್ಫ್ ಧರಿಸಿ ಕ್ಯಾಂಪಸ್ಗೆ ಬರುತ್ತಿದ್ದರು ಆದರೆ ಅದನ್ನು ತೆಗೆದು ತರಗತಿಗೆ ಪ್ರವೇಶಿಸುತ್ತಿದ್ದರು ಎಂದು ಕಾಲೇಜು ಪ್ರಾಂಶುಪಾಲ ರುದ್ರೇಗೌಡ ಹೇಳಿದ್ದಾರೆ.
‘ಕಳೆದ 35 ವರ್ಷಗಳಲ್ಲಿ ಯಾರೂ ತರಗತಿಗೆ ಹಿಜಾಬ್ ಧರಿಸದ ಕಾರಣ ಸಂಸ್ಥೆಯು ಹಿಜಾಬ್ ಧರಿಸುವುದರ ಬಗ್ಗೆ ಯಾವುದೇ ನಿಯಮವನ್ನು ಹೊಂದಿಲ್ಲ. ಬೇಡಿಕೆಯೊಂದಿಗೆ ಬಂದ ವಿದ್ಯಾರ್ಥಿಗಳಿಗೆ ಹೊರಗಿನ ಶಕ್ತಿಗಳ ಬೆಂಬಲವಿದೆ” ಎಂದು ಹೇಳಿದ್ದಾರೆ.
CFI ಗೆ ನಿಷ್ಠರಾಗಿರುವ ವಿದ್ಯಾರ್ಥಿಗಳು ಹಿಜಾಬ್ ವಿವಾದ ಹುಟ್ಟು ಹಾಕಿದ್ದಾರೆ ಎಂದು ಬಾಲಕಿಯರ ಸರ್ಕಾರಿ ಪಿಯು ಕಾಲೇಜು, ಅದರ ಪ್ರಾಂಶುಪಾಲರು ಮತ್ತು ಶಿಕ್ಷಕರನ್ನು ಪ್ರತಿನಿಧಿಸುವ ಹಿರಿಯ ವಕೀಲ ಎಸ್ಎಸ್ ನಾಗಾನಂದ್ ಅವರು ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಜೆಎಂ ಖಾಜಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ಪೂರ್ಣ ಪೀಠಕ್ಕೆ ಬುಧವಾರ ಹೇಳಿದ್ದಾರೆ.
ಇದಕ್ಕೆ ಮುಖ್ಯ ನ್ಯಾಯಮೂರ್ತಿಗಳು ಸಿಎಫ್ಐ ಏನನ್ನು ಪ್ರತಿನಿಧಿಸುತ್ತದೆ ಮತ್ತು ಅದರ ಪಾತ್ರವೇನು ಎಂದು ತಿಳಿಯಲು ಪ್ರಯತ್ನಿಸಿದರು. ಸಂಘಟನೆಯು ರಾಜ್ಯದಲ್ಲಿ ಪ್ರತಿಭಟನೆಗಳನ್ನು ಸಂಘಟಿಸುತ್ತಿದೆ ಎಂದು ಹಿರಿಯ ವಕೀಲರು ತಿಳಿಸಿದರು. ‘ಇದೊಂದು ಸ್ವಯಂಸೇವಾ ಸಂಸ್ಥೆಯೂ ಆಗಿದೆ, ಇದು ವಿದ್ಯಾರ್ಥಿನಿಯರ ಪರವಾಗಿ ಹಿಜಾಬ್ ಹೋರಾಟದಲ್ಲಿ ಮುಂಚೂಣಿಯಲ್ಲಿದೆ ಎಂದಿದಾರೆ.
ಮತ್ತೊಬ್ಬ ವಕೀಲರು ಸಿಎಫ್ಐ ಮೂಲಭೂತವಾದಿ ಸಂಘಟನೆಯಾಗಿದ್ದು, ಇದನ್ನು ಕಾಲೇಜುಗಳು ಗುರುತಿಸಿಲ್ಲ ಎಂದಿದ್ದಾರೆ.
ಆಗ ಮುಖ್ಯ ನ್ಯಾಯಮೂರ್ತಿ ಅವಸ್ತಿ ಅವರು ರಾಜ್ಯಕ್ಕೆ ಇದರ ಬಗ್ಗೆ ತಿಳಿದಿದೆಯೇ ಎಂದು ಕೇಳಿದರು, ಅದಕ್ಕೆ ನಾಗಾನಂದ್ ಅವರು ಇಂಟೆಲಿಜೆನ್ಸ್ ಬ್ಯೂರೋಗೆ ತಿಳಿದಿದೆ ಎಂದು ಹೇಳಿದರು.
ಬಳಿಕ ಸಿಎಫ್ಐ ಪಾತ್ರದ ಬಗ್ಗೆ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಮುಖ್ಯ ನಾಯಮೂರ್ತಿಗಳು ಸೂಚನೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.