ಬೆಂಗಳೂರು: ಕೋವಿಡ್ ಸಾಂಕ್ರಾಮಿಕದ ಬಳಿಕ ಚೇತರಿಸಿಕೊಂಡ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಕಳೆದ ಸಾಲಿನ ಬಜೆಟ್ಗಿಂತ ಶೇ 7.7ರಷ್ಟು ಹೆಚ್ಚು ಪ್ರಮಾಣದ ಬಜೆಟ್ ಇದಾಗಿದ್ದು, ಶಿಕ್ಷಣ- ಉದ್ಯೋಗ- ಸಬಲೀಕರಣಕ್ಕೆ ಆದ್ಯತೆ ನೀಡಲಿದೆ. ರೈತರ ಆದಾಯ ದ್ವಿಗುಣಗೊಳಿಸಲು ಆದ್ಯತೆ ಮತ್ತು ವಿಶೇóಷ ಉಪಕ್ರಮಗಳಿರುವ ಆಯವ್ಯಯ ಪತ್ರ. ಇದಾಗಿದ್ದು, ರೈತ ಶಕ್ತಿ ಹೊಸ ಯೋಜನೆ ಪ್ರಕಟಿಸಲಾಗಿದೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ.
ನವಭಾರತಕ್ಕೆ ಪೂರಕವಾಗಿರುವ ನೂತನ ಕರ್ನಾಟಕದ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ದೂರದೃಷ್ಟಿ ಇರುವ ಮತ್ತು ಸರ್ವಸ್ಪರ್ಶಿ ಯೋಜನೆಗಳಿರುವ ಬಜೆಟ್ ಇದಾಗಿದೆ. ಇದನ್ನು ಸ್ವಾಗತಿಸುವುದಾಗಿ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ 1 ಸಾವಿರ ಕೋಟಿ ಅನುದಾನ ನೀಡಲಾಗಿದೆ. ಮಹಿಳಾ ಸಬಲೀಕರಣ, ಮಕ್ಕಳ ಕಲ್ಯಾಣ ಸೇರಿದಂತೆ ಎಲ್ಲ ವಲಯಗಳ ಅಭಿವೃದ್ಧಿಯ ಅಂಶಗಳನ್ನು ಈ ಬಜೆಟ್ ಒಳಗೊಂಡಿದೆ ಎಂದು ಅವರು ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶಗಳು, ಹಿಂದುಳಿದ ಪ್ರದೇಶಗಳ ಅಭಿವೃದ್ಧಿ ಜೊತೆಗೆ ಬೆಂಗಳೂರಿನ ಸಮಗ್ರ ಪ್ರಗತಿಗೆ ಯೋಜನೆಗಳನ್ನು ಮತ್ತು ಅನುದಾನವನ್ನು ಮುಖ್ಯಮಂತ್ರಿಗಳು ನೀಡಿದ್ದು ಸ್ವಾಗತಾರ್ಹ ಎಂದು ಅವರು ತಿಳಿಸಿದ್ದಾರೆ.
ಶಿಕ್ಷಣದ ಮೂಲಕ ಅಭಿವೃದ್ಧಿ ಸಾಧ್ಯ ಎಂಬ ಪ್ರಮುಖ ಚಿಂತನೆಯನ್ನು ಈ ಆಯವ್ಯಯ ಪತ್ರದಲ್ಲಿ ಕಾಣಬಹುದು. ಶಿಕ್ಷಣ, ಉದ್ಯೋಗ, ಆರೋಗ್ಯ ಕ್ಷೇತ್ರಗಳ ಸಬಲೀಕರಣ, ಕೃಷಿಗೆ ಆದ್ಯತೆ ನೀಡುವ ಬಜೆಟ್ ಇದಾಗಿದೆ ಎಂದು ಅವರು ಶ್ಲಾಘಿಸಿದ್ದಾರೆ.
ಶಿಕ್ಷಣ 31,980 ಕೋಟಿ, ಒಳನಾಡು ಸಾರಿಗೆ 11,222 ಕೋಟಿ, ಗ್ರಾಮೀಣಾಭಿವೃದ್ಧಿಗೆ 17,325 ಕೋಟಿ, ಗಂಗಾ ಕಲ್ಯಾಣ 1,115 ಕೋಟಿ, ಆರೋಗ್ಯ ಇಲಾಖೆ 13,982 ಕೋಟಿ, ಸಾರಿಗೆ ಇಲಾಖೆ 11,222 ಕೋಟಿ, ಕಲ್ಯಾಣ ಕರ್ನಾಟಕ 3,000 ಕೋಟಿ, ಕಂದಾಯ 16,388 ಕೋಟಿ, ಜಲಸಂಪನ್ಮೂಲ 20,601 ಕೋಟಿ, ಸಮಾಜ ಕಲ್ಯಾಣ 9389 ಕೋಟಿ, ಇಂಧನ ಇಲಾಖೆ 12655 ಕೋಟಿ, ಕೃಷಿ ಇಲಾಖೆ 8457 ಕೋಟಿ, ನಗರಾಭಿವೃದ್ಧಿ 16076 ಕೋಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 4713 ಕೋಟಿ, ಬೆಂಗಳೂರು ಮೂಲಭೂತ ಸೌಕರ್ಯ 6,000 ಕೋಟಿ ರೂಪಾಯಿ ಅನುದಾನ ನೀಡಿದ್ದು, ಇದು ಸರ್ವತೋಮುಖ ಅಭಿವೃದ್ಧಿಗೆ ಸಹಾಯಕ ಎಂದು ಅವರು ವಿಶ್ಲೇಷಿಸಿದ್ದಾರೆ. ರಾಜ್ಯದ ಎಲ್ಲ ವರ್ಗಗಳ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನ ಈ ಬಜೆಟ್ ಒಳಗೊಂಡಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.