ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಗಾಜಿಯಾಬಾದ್ನ ಇಂದಿರಾಪುರಂನಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) 53 ನೇ ಸ್ಥಾಪನಾ ದಿನದ ಸಮಾರಂಭದಲ್ಲಿ ಭಾಗವಹಿಸಿದ್ದರು, ಅಲ್ಲಿ ಅವರು 53 ನೇ ರೈಸಿಂಗ್ ಡೇ ಪರೇಡ್ ಅನ್ನು ಸಹ ಪರಿಶೀಲಿಸಿದರು.
ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಶಾ, ಕೋವಿಡ್ -19 ಸಮಯದಲ್ಲಿ ಸಿಐಎಸ್ಎಫ್ ಸಿಬ್ಬಂದಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟಿದ್ದರು ಮತ್ತು ಈಗ ಉಕ್ರೇನ್ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ನಾಗರಿಕರನ್ನು ನೋಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
“ಕೊರೋನಾವೈರಸ್ ಸಾಂಕ್ರಾಮಿಕ ಸಮಯದಲ್ಲಿ ಭಾರತೀಯರು ವಿದೇಶದಿಂದ ಹಿಂತಿರುಗುತ್ತಿದ್ದಾಗ ಸಿಐಎಸ್ಎಫ್ ಸಿಬ್ಬಂದಿ ಅಪಾಯವನ್ನು ಲೆಕ್ಕಿಸಿದೆ ಅವರನ್ನು ನೋಡಿಕೊಂಡರು ಮತ್ತು ಈ ಸಂದರ್ಭದಲ್ಲಿ ಹಲವಾರು ಮಂದಿ ಪ್ರಾಣ ಕಳೆದುಕೊಂಡರು. ಆಪರೇಷನ್ ಗಂಗಾ ಅಡಿಯಲ್ಲಿ ಉಕ್ರೇನ್ನಿಂದ ಹಿಂದಿರುಗಿದ ನಾಗರಿಕರನ್ನು ಕೂಡ ಅವರು ನೋಡಿಕೊಳ್ಳುತ್ತಿದ್ದಾರೆ, ”ಎಂದು ಶಾ ಹೇಳಿದ್ದಾರೆ.
53ನೇ ರೈಸಿಂಗ್ ಡೇ ಸಮಾರಂಭದಲ್ಲಿ ಮಾತನಾಡಿದ ಸಿಐಎಸ್ಎಫ್ ಡಿಜಿ ಶೀಲ್ ವರ್ಧನ್ ಸಿಂಗ್, ಇಂದು ನಾವು ಬಾಹ್ಯಾಕಾಶ ಮತ್ತು ಪರಮಾಣು ಶಕ್ತಿ ಕೇಂದ್ರಗಳು, ಬಂದರುಗಳು, ವಿಮಾನ ನಿಲ್ದಾಣಗಳು ಮತ್ತು ಮೆಟ್ರೋದಲ್ಲಿ ಭದ್ರತೆಯಲ್ಲಿ ಮುಂಚೂಣಿಯಲ್ಲಿರುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದೇವೆ ಎಂದರು.
“ದೆಹಲಿ ಮೆಟ್ರೋದಲ್ಲಿ 30 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಮತ್ತು ದೇಶಾದ್ಯಂತದ ವಿಮಾನ ನಿಲ್ದಾಣಗಳಲ್ಲಿ 10 ಲಕ್ಷ ಪ್ರಯಾಣಿಕರು ಸಿಐಎಸ್ಎಫ್ನ ಭದ್ರತೆಯ ಮೂಲಕ ಹಾದು ಹೋಗುತ್ತಾರೆ, ನಾವು 12 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಿಮಾನ ಪ್ರಯಾಣಿಕರಿಗೆ ಹಿಂದಿರುಗಿಸಿದ್ದೇವೆ ಮತ್ತು ನಮ್ಮ ಸಿಬ್ಬಂದಿ ತುರ್ತು ಸಂದರ್ಭಗಳಲ್ಲಿ ಜನರಿಗೆ ಸಹಾಯ ಮಾಡಿದ್ದಾರೆ” ಎಂದು ಅವರು ಹೇಳಿದರು.
ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ CISF ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಮತ್ತು ಭಾರತದ ಆರು ಅರೆಸೇನಾ ಪಡೆಗಳಲ್ಲಿ ಒಂದಾಗಿದೆ. ಮಾರ್ಚ್ 10, 1969 ರಂದು ಭಾರತದ ಸಂಸತ್ತಿನ ಕಾಯಿದೆಯಡಿಯಲ್ಲಿ ಇದನ್ನು ಸ್ಥಾಪಿಸಿದಾಗಿನಿಂದ ಪ್ರತಿ ವರ್ಷ ಮಾರ್ಚ್ 10 ರಂದು CISF ರೈಸಿಂಗ್ ದಿನವನ್ನು ಆಚರಿಸಲಾಗುತ್ತದೆ.
Union Home Minister Amit Shah inspects 53rd Raising Day parade of Central Industrial Security Force at Indirapuram, Ghaziabad pic.twitter.com/wXQm9IdsGv
— ANI (@ANI) March 6, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.