ಕರ್ಣಾವತಿ: ಈ ವರ್ಷದ ಅಖಿಲ ಭಾರತೀಯ ಪ್ರತಿನಿಧಿ ಸಭೆಯು ಗುಜರಾತ್ನ ಕರ್ಣಾವತಿಯಲ್ಲಿ ಮಾರ್ಚ್ 11 ರಿಂದ 13 ರವರೆಗೆ ನಡೆಯಲಿದೆ ಎಂದು ಆರ್ಎಸ್ಎಸ್ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಸುನೀಲ್ ಅಂಬೇಕರ್ ಹೇಳಿದ್ದಾರೆ.
ಕರ್ಣಾವತಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಭೆಯು ಸಂಘದ ನಿರ್ಣಯದ ದೃಷ್ಟಿಕೋನದಿಂದ ಅತ್ಯಂತ ಮಹತ್ವದ್ದಾಗಿದೆ ಮತ್ತು ಸಭೆಯಲ್ಲಿ ಮುಂಬರುವ ವರ್ಷಗಳ ವಿವಿಧ ಯೋಜನೆಗಳು ಮತ್ತು ನಿರ್ಧಾರಗಳನ್ನು ಸಹ ಅಂತಿಮಗೊಳಿಸಲಾಗುತ್ತದೆ. ಹಿಂದಿನ ವರ್ಷದಲ್ಲಿ, ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಸಭೆಯನ್ನು ಸಣ್ಣ ಮಟ್ಟದಲ್ಲಿ ನಡೆಸಲಾಯಿತು, ಕೆಲವು ಕಾರ್ಯಕರ್ತರು ವೈಯಕ್ತಿಕವಾಗಿ ಸಭೆಗೆ ಹಾಜರಿದ್ದರು ಮತ್ತು ಇತರರು ತಮ್ಮ ಪ್ರಾಂತ ಕೇಂದ್ರದಿಂದ ಆನ್ಲೈನ್ನಲ್ಲಿ ಸೇರಿಕೊಂಡಿದ್ದರು. ಈ ವರ್ಷ ಗುಜರಾತ್ನಲ್ಲಿ ಸಭೆಯನ್ನು ಅಗತ್ಯ ಕೋವಿಡ್ ಪ್ರೋಟೋಕಾಲ್ಗಳನ್ನು ಅನುಸರಿಸಿ ನಡೆಸಲಾಗುತ್ತದೆ, ಈ ಕಾರಣದಿಂದಾಗಿ ಸಭೆಗೆ ಸೇರುವ ನಿರೀಕ್ಷಿತ ಕಾರ್ಯಕರ್ತರ ಸಂಖ್ಯೆ ಕಡಿಮೆಯಾಗಿದೆ ಎಂದು ಪ್ರಚಾರ್ ಪ್ರಮುಖ್ ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮೊದಲು, ಪ್ರತಿನಿಧಿ ಸಭೆಯನ್ನು ನಾಗ್ಪುರದಲ್ಲಿ ಮಾತ್ರ ನಡೆಸಲಾಗುತ್ತಿತ್ತು, ಆದರೆ ನಾಗ್ಪುರದ ಹೊರಗೆ ಮೊದಲ ಪ್ರತಿನಿಧಿ ಸಭೆಯನ್ನು 1988 ರಲ್ಲಿ ರಾಜ್ಕೋಟ್ನಲ್ಲಿ ನಡೆಸಲಾಯಿತು.
ಈ ವರ್ಷ 1248 ಪ್ರತಿನಿಧಿಗಳು ಪ್ರತಿನಿಧಿ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಆರ್ಎಸ್ಎಸ್ ಸರಸಂಘಚಾಲಕ್ ಡಾ ಮೋಹನ್ ಭಾಗವತ್ ಅವರ ಮಾರ್ಗದರ್ಶನದಲ್ಲಿ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಅಖಿಲ ಭಾರತೀಯ ಪ್ರತಿನಿಧಿ ಸಭೆ (ಎಬಿಪಿಎಸ್) ನಡೆಸಲಿದ್ದಾರೆ. ಈ ಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳಲ್ಲದೆ, ಪ್ರಾಂತ ಸಂಘಚಾಲಕ್, ಪ್ರಾಂತ ಕಾರ್ಯವಾಹ ಮತ್ತು ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಈ ಬಾರಿ ಸಂಘಟನಾ ಮಂತ್ರಿ ಹಾಗೂ 36 ಸಂಸ್ಥೆಗಳ ಪ್ರತಿನಿಧಿಗಳು ಬೈಠಕ್ನಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.