ನವದೆಹಲಿ: ನರೇಂದ್ರ ಮೋದಿ ಸರ್ಕಾರ ಯಾವುದೇ ತುಷ್ಟೀಕರಣ, ತಾರತಮ್ಯ ಮತ್ತು ರಾಜಕೀಯ ಶೋಷಣೆ ಇಲ್ಲದೆ ಅಲ್ಪಸಂಖ್ಯಾತರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಲೋಕಸಭೆಯಲ್ಲಿ ಗುರುವಾರ ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಅಲ್ಪಸಂಖ್ಯಾತರಿಗೆ ಅಭಿವೃದ್ಧಿ ಉಪಕ್ರಮಗಳು ಕಡಿಮೆಯಾಗಿವೆ ಎಂಬ ಆರೋಗಳನ್ನು ಅಲ್ಲಗೆಳೆದ ನಖ್ವಿ, ಹಿಂದಿನ ಯುಪಿಎ ಆಡಳಿತಕ್ಕಿಂತ ಮೋದಿ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದಂತಹ ಯೋಜನೆಗಳಿಗೆ ಹೆಚ್ಚಿನ ಹಣ ಹಂಚಿಕೆಯಾಗಿದೆ ಎಂದು ಹೇಳಿದರು.
ಬಡವರು, ಹಿಂದುಳಿದವರು ಮತ್ತು ದೀನದಲಿತರನ್ನು ಯಾವುದೇ ತುಷ್ಟೀಕರಣವಿಲ್ಲದೆ ನಾವು ಸಬಲೀಕರಣಗೊಳಿಸುತ್ತಿದ್ದೇವೆ, ನಾವು ತಾರತಮ್ಯವಿಲ್ಲದೆ ಅಭಿವೃದ್ಧಿಯ ಮಂತ್ರವನ್ನು ಮತ್ತು ಘನತೆಯಿಂದ ಸಬಲೀಕರಣವನ್ನು ಅನುಸರಿಸುತ್ತಿದ್ದೇವೆ ಎಂದು ಅವರು ಪ್ರಶ್ನೋತ್ತರ ವೇಳೆಯಲ್ಲಿ ಹೇಳಿದ್ದಾರೆ.
ಮೋದಿ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಅಧ್ಯಯನದ ಅಂಕಿಅಂಶಗಳನ್ನು ನೀಡಿದ ನಖ್ವಿ, ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಲಾದ 2.31 ಕೋಟಿ ಮನೆಗಳಲ್ಲಿ 31% ರಷ್ಟು 25 ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಹಂಚಿಕೆ ಮಾಡಲಾಗಿದೆ, 33% ಕಿಸಾನ್ ಸಮ್ಮಾನ್ ನಿಧಿ ಫಲಾನುಭವಿಗಳು ಅಲ್ಪಸಂಖ್ಯಾತರು ಮತ್ತು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಒಂಬತ್ತು ಕೋಟಿ ಫಲಾನುಭವಿಗಳಲ್ಲಿ 37 ಪ್ರತಿಶತದಷ್ಟು ಜನರು ಅಲ್ಪಸಂಖ್ಯಾತ ಸಮುದಾಯದವರು ಎಂದಿದ್ದಾರೆ.
ಪ್ರಧಾನ ಮಂತ್ರಿ ಮುದ್ರಾ ಯೋಜನೆಯ 36 ಪ್ರತಿಶತ ಫಲಾನುಭವಿಗಳು ಅಲ್ಪಸಂಖ್ಯಾತ ಸಮುದಾಯಗಳಿಂದ ಬಂದವರು ಎಂದು ಅವರು ಹೇಳಿದರು.
ಯಾವುದೇ ರಾಜಕೀಯ ಶೋಷಣೆ ಇಲ್ಲದೆ, ಸದ್ದು ಮಾಡದೆ ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದೇವೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.