ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಜಲ ಶಕ್ತಿ ಅಭಿಯಾನ – ಕ್ಯಾಚ್ ದಿ ರೈನ್ 2022 ಕ್ಕೆ ಚಾಲನೆ ನೀಡಿದರು, ಇದು ದೇಶದಲ್ಲಿ ನೀರಿನ ಭದ್ರತೆಯನ್ನು ಖಾತ್ರಿಪಡಿಸುವ ಹೊಸ ಯುಗಕ್ಕೆ ನಾಂದಿ ಹಾಡಿದೆ.
ಅಭಿಯಾನವು ಈ ವರ್ಷ ನವೆಂಬರ್ 30 ರವರೆಗೆ ಮುಂದುವರಿಯುತ್ತದೆ. ಈ ವರ್ಷದ ಅಭಿಯಾನದ ಗಮನವು ಸ್ಪ್ರಿಂಗ್ಶೆಡ್ ಅಭಿವೃದ್ಧಿ, ಜಲಾನಯನ ಪ್ರದೇಶ ಹೆಚ್ಚಳ ಮಾಡವುದಾಗಿದೆ. ದೇಶದಾದ್ಯಂತ ಜಲ ಭದ್ರತೆ ಮತ್ತು ಜಲಮೂಲಗಳ ಸಂರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಪರಿಣಾಮಕಾರಿಯಾದ ಸರ್ವ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಕೋವಿಂದ್ ಹೇಳಿದರು.
ನೀರಿನ ಬಿಕ್ಕಟ್ಟು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಣಾಮ ಬೀರಿದೆ ಎಂದು ಹೇಳಿದ ಅವರು, ಅಭಿಯಾನದ ಯಶಸ್ಸನ್ನು ಖಚಿತಪಡಿಸಿಕೊಳ್ಳಲು ಜನರಿಗೆ ಮನವಿ ಮಾಡಿದರು. ಜಲಸಂರಕ್ಷಣೆಗಾಗಿ ಜನಾಂದೋಲನ ಹಮ್ಮಿಕೊಳ್ಳಬೇಕು ಎಂದರು
ಈ ಸಂದರ್ಭದಲ್ಲಿ ರಾಷ್ಟ್ರಪತಿಯವರು ನವದೆಹಲಿಯಲ್ಲಿ 3ನೇ ರಾಷ್ಟ್ರೀಯ ಜಲ ಪ್ರಶಸ್ತಿ ವಿಜೇತರನ್ನು ಸನ್ಮಾನಿಸಿದರು.
ಜಲ ಸಂರಕ್ಷಣಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿರುವ ರಾಜ್ಯ ಸರ್ಕಾರಗಳು, ಸಂಘಟನೆಗಳು ಮತ್ತು ವ್ಯಕ್ತಿಗಳಿಗೆ 57 ಪ್ರಶಸ್ತಿಗಳನ್ನು ಹಾಗೂ ಅತ್ಯುತ್ತಮ ರಾಜ್ಯ, ಅತ್ಯುತ್ತಮ ಜಿಲ್ಲೆ, ಅತ್ಯುತ್ತಮ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ವಿವಿಧ 11 ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.
ಅತ್ಯುತ್ತಮ ರಾಜ್ಯ ಪ್ರಶಸ್ತಿಗಳ ವಿಭಾಗದಲ್ಲಿ ಉತ್ತರ ಪ್ರದೇಶ, ರಾಜಸ್ಥಾನ ಮತ್ತು ತಮಿಳುನಾಡು ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ಪಡೆದಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.