ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ತುರ್ಕಮೆನಿಸ್ತಾನ್ ಮತ್ತು ನೆದರ್ಲ್ಯಾಂಡ್ಸ್ಗೆ ಎರಡು ರಾಷ್ಟ್ರಗಳ ಪ್ರವಾಸವನ್ನು ಕೈಗೊಂಡಿದ್ದಾರೆ. ಪ್ರವಾಸದ ಮೊದಲ ಹಂತದಲ್ಲಿ, ಅವರು ತುರ್ಕಮೆನಿಸ್ತಾನ್ಗೆ ಭೇಟಿ ನೀಡುತ್ತಿದ್ದಾರೆ. ಇದು ತುರ್ಕಮೆನಿಸ್ತಾನಕ್ಕೆ ಭಾರತೀಯ ರಾಷ್ಟ್ರಪತಿಗಳ ಮೊದಲ ಭೇಟಿಯಾಗಿದೆ.
ಭಾರತವು ತುರ್ಕಮೆನಿಸ್ತಾನದೊಂದಿಗೆ 30 ವರ್ಷಗಳ ರಾಜತಾಂತ್ರಿಕ ಸಂಬಂಧವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಈ ಭೇಟಿಯು ಮಹತ್ವದ್ದಾಗಿದೆ. ತುರ್ಕಮೆನಿಸ್ತಾನ್ನ ಹೊಸ ಅಧ್ಯಕ್ಷ ಸೆರ್ದಾರ್ ಬರ್ಡಿಮುಹಮೆಡೋವ್ ಅಧಿಕಾರ ವಹಿಸಿಕೊಂಡ ಎರಡು ವಾರಗಳಲ್ಲಿ ಈ ಭೇಟಿ ನಡೆಯುತ್ತಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಲ್ಲಿನ ಅಧ್ಯಕ್ಷರೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ, ನಂತರ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ನಿಯೋಗ ಮಟ್ಟದ ಮಾತುಕತೆಗಳು ಮತ್ತು ಹಲವಾರು ಒಪ್ಪಂದಗಳಿಗೆ ಸಹಿ ಹಾಕಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ರಾಜ್ಯ ಸಚಿವ ಡಾ. ಎಲ್. ಮುರುಗನ್ ಮತ್ತು ಸಂಸದ ದಿಲೀಪ್ ಘೋಷ್ ಅವರು ಈ ಪ್ರವಾಸದಲ್ಲಿ ರಾಷ್ಟ್ರಪತಿಗಳ ಜೊತೆಯಲ್ಲಿದ್ದಾರೆ.
ಎರಡನೇ ಹಂತದಲ್ಲಿ ರಾಷ್ಟ್ರಪತಿ ಕೋವಿಂದ್ ಅವರು ಸೋಮವಾರದಿಂದ ನಾಲ್ಕು ದಿನ ನೆದರ್ಲೆಂಡ್ಸ್ಗೆ ಭೇಟಿ ನೀಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.