ತುಮಕೂರು: ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳು ತಮ್ಮ ಸಂಪೂರ್ಣ ಜೀವನವನ್ನು ಬಡವರಿಗೆ ಮತ್ತು ನಿರ್ಗತಿಕರಿಗೆ ಆಹಾರ, ಆಶ್ರಯ ಮತ್ತು ಶಿಕ್ಷಣವನ್ನು ನೀಡಲು ಸಮರ್ಪಿಸಿಕೊಂಡಿದ್ದರು. ಅವರು ತಮ್ಮ ನಿಸ್ವಾರ್ಥ ಸೇವೆ ಮತ್ತು ಮಾನವೀಯ ಕಾರ್ಯಗಳ ಮೂಲಕ ಅಸಂಖ್ಯಾತ ಜನರ ಜೀವನವನ್ನು ಸಬಲೀಕರಿಸಿದ ಮಹಾಚೇತನ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ.
ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ 115 ನೇ ಜಯಂತಿ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.
ಶ್ರೀಗಳ ನಂತರವೂ ಅವರ ಕಾಯಕ ಮುಂದುವರೆಯುವುದು ಸಂತೋಷ. ಸ್ವಾಮಿಗಳ ಎದುರು ನಮಗೆ ದೇಶಕ್ಕೆ ಆಶೀರ್ವಾದ ಬೇಡಿಕೊಂಡಿದ್ದೇನೆ. ಶಿವಕುಮಾರ ಶ್ರೀಗಳ ಮೂರು ಆದರ್ಶಗಳನ್ನು ಮೋದಿ ಪಾಲಿಸಿದ್ದಾರೆ. ಶ್ರೀಗಳು ಅನ್ನ, ಅಕ್ಷರ ಮತ್ತು ಆಶ್ರಯ ನೀಡಿದರು. ಮೋದಿಜಿ ಆಹಾರ, ವಸತಿ, ಶಿಕ್ಷಣವನ್ನು ನೀಡುತ್ತಿದ್ದಾರೆ. ಕೊರೋನಾ ಕಾಲದಲ್ಲಿ ಜನರಿಗೆ ಉಚಿತ ಆಹಾರ ಧಾನ್ಯ ನೀಡಿದರು. ಮೂರು ಕೋಟಿ ಬಡ ಜನರಿಗೆ ವಸತಿ ಒದಗಿಸಿದ್ದಾರೆ. ಮಕ್ಕಳಿಗೆ ಮಾತೃಭಾಷೆಯಲ್ಲಿ ಓದುವ ಅವಕಾಶ ನೀಡಿದ್ದಾರೆ ಎಂದರು.
ಕರ್ಮಯೋಗಿಯಾಗಿ ಜೀವನವನ್ನು ನಡೆಸಿದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜೀವನದಿಂದ ಸಿದ್ದಗಂಗಾ ಆಧ್ಯಾತ್ಮಿಕ ಸ್ಥಳವಾಯಿತು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.