ನವದೆಹಲಿ: ಇದೇ ಮೊದಲ ಬಾರಿಗೆ, ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯವು ತೃತೀಯ ಲಿಂಗಿ ವ್ಯಕ್ತಿಯನ್ನು ರಾಷ್ಟ್ರೀಯ ಸಂಸ್ಕೃತಿ ನಿಧಿಯ ಕೌನ್ಸಿಲ್ ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ನೇಮಿಸಿದೆ.
ತಮಿಳುನಾಡಿನ ಮಧುರೈ ಜಿಲ್ಲೆಯ ಸಣ್ಣ ಪಟ್ಟಣವಾದ ಉಸಿಲಂಪಟ್ಟಿಯಲ್ಲಿ ಜನಿಸಿದ ಹಿರಿಯ ಟ್ರಾನ್ಸ್ಜೆಂಡರ್ ಹಕ್ಕುಗಳ ಕಾರ್ಯಕರ್ತ ಊರ್ವಸಿ ಗಾಂಧಿ ಅವರನ್ನು ರಾಷ್ಟ್ರೀಯ ಸಂಸ್ಕೃತಿ ನಿಧಿಯ ಕೌನ್ಸಿಲ್ ಮತ್ತು ಕಾರ್ಯಕಾರಿ ಸಮಿತಿಯ ಅಧಿಕಾರೇತರ ಸದಸ್ಯರನ್ನಾಗಿ ನೇಮಿಸಲಾಗಿದೆ.
ಅವರು ಅಂಬುಜಾ ನಿಯೋಟಿಯಾ ಗ್ರೂಪ್ನ ಅಧ್ಯಕ್ಷ ಹರ್ಷವರ್ಧನ್ ನಿಯೋಟಿಯಾ, ಮೂರ್ತಿ ಫೌಂಡೇಶನ್ನ ಅಧ್ಯಕ್ಷೆ ಸುಧಾ ಮೂರ್ತಿ ಮುಂತಾದ ಗೌರವಾನ್ವಿತ ಜನರೊಂದಿಗೆ ಸ್ಥಾನವನ್ನು ಹಂಚಿಕೊಳ್ಳಲಿದ್ದಾರೆ.
ಗಾಂಧಿ ಅವರು ಎರಡು ದಶಕಗಳಿಗೂ ಹೆಚ್ಚು ಕಾಲ ತಮಿಳುನಾಡಿನ ಗ್ರಾಮೀಣ ತೃತೀಯ ಲಿಂಗಿ ಸಮುದಾಯಗಳಿಗಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ಈ ಸಮುದಾಯಕ್ಕೆ ಅವರ ಆಸ್ತಿ ಹಕ್ಕುಗಳು ಮತ್ತು ಆಶ್ರಯ, ನೈರ್ಮಲ್ಯ ಮುಂತಾದ ಮೂಲಭೂತ ಸೌಲಭ್ಯಗಳನ್ನು ಪಡೆಯಲು ಬೆಂಬಲಿಸುತ್ತಿದ್ದಾರೆ.
ತಮಿಳುನಾಡಿನಲ್ಲಿ ಸ್ಥಳೀಯ ತೃತೀಯ ಲಿಂಗಿ ಸಮುದಾಯಗಳ ಸಂಪ್ರದಾಯ ಮತ್ತು ಆಧ್ಯಾತ್ಮಿಕ ಸ್ಥಳಗಳನ್ನು ರಕ್ಷಿಸಲು ಕೆಲಸ ಮಾಡುತ್ತಿರುವ ಕೆಲವೇ ಜನರಲ್ಲಿ ಅವರು ಒಬ್ಬರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.