ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರ ಗುಜರಾತ್ನ ಬನಸ್ಕಾಂತ ಜಿಲ್ಲೆಯ ದಿಯೋದರ್ನಲ್ಲಿರುವ ಬನಾಸ್ ಡೈರಿ ಸಂಕುಲದಲ್ಲಿ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಸುಮಾರು 600 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಹೊಸ ಡೈರಿ ಕಾಂಪ್ಲೆಕ್ಸ್ ಮತ್ತು ಆಲೂಗೆಡ್ಡೆ ಸಂಸ್ಕರಣಾ ಘಟಕವನ್ನು ಅವರು ದೇಶಕ್ಕೆ ಸಮರ್ಪಿಸಿದರು. ಹೊಸ ಡೈರಿ ಸಂಕೀರ್ಣವು ಹಸಿರು-ಕ್ಷೇತ್ರ ಯೋಜನೆಯಾಗಿದೆ. ಇದು ದಿನಕ್ಕೆ ಸುಮಾರು 30 ಲಕ್ಷ ಲೀಟರ್ ಹಾಲು ಸಂಸ್ಕರಣೆ, ಸುಮಾರು 80 ಟನ್ ಬೆಣ್ಣೆ, ಒಂದು ಲಕ್ಷ ಲೀಟರ್ ಐಸ್ ಕ್ರೀಮ್, 20 ಟನ್ ಮಂದಗೊಳಿಸಿದ ಹಾಲು, ಖೋವ ಮತ್ತು ಆರು ಟನ್ ಚಾಕೊಲೇಟ್ ಅನ್ನು ಉತ್ಪಾದಿಸುತ್ತದೆ.
ಆಲೂಗಡ್ಡೆ ಸಂಸ್ಕರಣಾ ಘಟಕವು ಫ್ರೆಂಚ್ ಫ್ರೈಸ್, ಆಲೂಗಡ್ಡೆ ಚಿಪ್ಸ್, ಆಲೂ ಟಿಕ್ಕಿ ಮತ್ತು ಪ್ಯಾಟಿಗಳಂತಹ ವಿವಿಧ ರೀತಿಯ ಸಂಸ್ಕರಿಸಿದ ಆಲೂಗಡ್ಡೆ ಉತ್ಪನ್ನಗಳನ್ನು ಉತ್ಪಾದಿಸುತ್ತದೆ, ಇವುಗಳನ್ನು ಹಲವು ದೇಶಗಳಿಗೆ ರಫ್ತು ಮಾಡಲಾಗುವುದು. ಈ ಘಟಕಗಳು ಸ್ಥಳೀಯ ರೈತರನ್ನು ಸಬಲೀಕರಣಗೊಳಿಸುತ್ತವೆ ಮತ್ತು ಈ ಪ್ರದೇಶದಲ್ಲಿ ಗ್ರಾಮೀಣ ಆರ್ಥಿಕತೆಗೆ ಉತ್ತೇಜನ ನೀಡುತ್ತವೆ.
ಪ್ರಧಾನಮಂತ್ರಿಯವರು ಬನಾಸ್ ಸಮುದಾಯ ರೇಡಿಯೋ ಕೇಂದ್ರವನ್ನೂ ಲೋಕಾರ್ಪಣೆ ಮಾಡಿದರು. ಕೃಷಿ ಮತ್ತು ಪಶುಸಂಗೋಪನೆಗೆ ಸಂಬಂಧಿಸಿದ ಪ್ರಮುಖ ವೈಜ್ಞಾನಿಕ ಮಾಹಿತಿಯನ್ನು ರೈತರಿಗೆ ಒದಗಿಸಲು ಈ ಸಮುದಾಯ ರೇಡಿಯೋ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇದು ಸುಮಾರು 1,700 ಹಳ್ಳಿಗಳ ಐದು ಲಕ್ಷಕ್ಕೂ ಹೆಚ್ಚು ರೈತರಿಗೆ ಸಂಪರ್ಕ ಕಲ್ಪಿಸುತ್ತದೆ. ಪಾಲನ್ಪುರ್ನಲ್ಲಿರುವ ಬನಾಸ್ ಡೈರಿ ಪ್ಲಾಂಟ್ನಲ್ಲಿ ಚೀಸ್ ಉತ್ಪನ್ನಗಳು ಮತ್ತು ಹಾಲಿನ ಪುಡಿ ಉತ್ಪಾದನೆಗೆ ವಿಸ್ತೃತ ಸೌಲಭ್ಯಗಳನ್ನು ಮೋದಿ ಸಮರ್ಪಿಸಿದರು.
ಡಾಮಾದಲ್ಲಿ ಸ್ಥಾಪಿಸಲಾದ ಸಾವಯವ ಗೊಬ್ಬರ ಮತ್ತು ಜೈವಿಕ ಅನಿಲ ಘಟಕವನ್ನು ಪ್ರಧಾನಿ ಉದ್ಘಾಟಿಸಿದರು. 100 ಟನ್ ಸಾಮರ್ಥ್ಯದ ನಾಲ್ಕು ಗೋಬರ್ ಗ್ಯಾಸ್ ಪ್ಲಾಂಟ್ಗಳಿಗೆ ಅಡಿಪಾಯ ಹಾಕಿದರು.
ಕಳೆದ ಹಲವಾರು ವರ್ಷಗಳಿಂದ ಬನಾಸ್ ಡೈರಿಯು ಸ್ಥಳೀಯ ಸಮುದಾಯಗಳನ್ನು ವಿಶೇಷವಾಗಿ ರೈತರು ಮತ್ತು ಮಹಿಳೆಯರನ್ನು ಸಬಲೀಕರಣಗೊಳಿಸುವ ಕೇಂದ್ರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.