ನವದೆಹಲಿ: ದೇಶಾದ್ಯಂತ ಕೋವಿಡ್-19 ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಹರಿಯಾಣ, ಉತ್ತರ ಪ್ರದೇಶ, ದೆಹಲಿ, ಮಹಾರಾಷ್ಟ್ರ ಮತ್ತು ಮಿಜೋರಾಂ ಸರ್ಕಾರಗಳಿಗೆ ಮಂಗಳವಾರ ಪತ್ರ ಬರೆದಿದ್ದು, ಹೆಚ್ಚುತ್ತಿರುವ ಪಾಸಿಟಿವ್ ಪ್ರಕರಣಗಳ ಕುರಿತು ಮೇಲ್ವಿಚಾರಣೆಯನ್ನು ಮುಂದುವರಿಸುವಂತೆ ಸೂಚಿಸಿದ್ದಾರೆ.
ಸಚಿವಾಲಯವು ತನ್ನ ಅಧಿಕೃತ ಬಿಡುಗಡೆಯಲ್ಲಿ, “ಕಳೆದ 2 ತಿಂಗಳುಗಳಲ್ಲಿ ಭಾರತವು ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರ ಮತ್ತು ಗಮನಾರ್ಹ ಕುಸಿತವನ್ನು ಕಂಡಿದೆ, ಕಳೆದ ಕೆಲವು ವಾರಗಳಿಂದ ದೇಶವು ಸುಮಾರು 1000 ದೈನಂದಿನ ಹೊಸ ಪ್ರಕರಣಗಳನ್ನು ವರದಿ ಮಾಡಿದೆ. ಸಾಪ್ತಾಹಿಕ ಪಾಸಿಟಿವ್ ದರವು ಶೇಕಡಾ 1 ಕ್ಕಿಂತ ಕಡಿಮೆಯಾಗಿದೆ” ಎಂದಿದೆ.
“ಇತ್ತೀಚೆಗೆ, ಭಾರತದ ಕೆಲವು ರಾಜ್ಯಗಳು ಹೆಚ್ಚಿನ ಪಾಸಿಟಿವ್ ಪ್ರಕರಣಗಳನ್ನು ವರದಿ ಮಾಡುತ್ತಿವೆ. ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಇಲ್ಲಿಯವರೆಗೆ ಗಳಿಸಿದ್ದನ್ನು ಕಳೆದುಕೊಳ್ಳದೆ, ಆರ್ಥಿಕ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ಅಪಾಯವಾಗದಂತೆ ಮೌಲ್ಯಮಾಪನ ಆಧಾರಿತ ವಿಧಾನವನ್ನು ಅನುಸರಿಸಲು ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಿದೆ” ಎಂದು ಮೂಲಗಳು ತಿಳಿಸಿವೆ.
ಸೋಂಕಿನ ಹರಡುವಿಕೆಯನ್ನು ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸಲು ಮತ್ತು ಕೋವಿಡ್-19 ರ ತ್ವರಿತ ಮತ್ತು ಪರಿಣಾಮಕಾರಿ ನಿರ್ವಹಣೆಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲು ಸಚಿವಾಲಯವು ರಾಜ್ಯಗಳಿಗೆ ಸಲಹೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.