ನವದೆಹಲಿ: ಮಲೇರಿಯಾ ಮತ್ತು ಕ್ಷಯರೋಗವನ್ನು ದೇಶದಿಂದ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಸಮಗ್ರ ಯೋಜನೆಯನ್ನು ರೂಪಿಸುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.
2030ರ ವೇಳೆಗೆ ದೇಶದಿಂದ ಮಲೇರಿಯಾ ನಿರ್ಮೂಲನೆ ಮಾಡುವ ಮತ್ತು 2025ರ ವೇಳೆಗೆ ಟಿಬಿ ಮುಕ್ತ ದೇಶವನ್ನಾಗಿ ಮಾಡುವ ಗುರಿಯನ್ನು ಸರಕಾರ ಹೊಂದಿದೆ ಎಂದರು.
ನವದೆಹಲಿಯಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ನಿಮಿತ್ತ ಆಯೋಜಿಸಿದ್ದ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಮಾಂಡವೀಯ, ಆರೋಗ್ಯ ಸಚಿವಾಲಯವು ಟಿಬಿ ಮತ್ತು ಮಲೇರಿಯಾವನ್ನು ನಿರ್ಮೂಲನೆ ಮಾಡುವ ಗುರಿಗಳನ್ನು ಸಾಧಿಸಲು ಸಮಗ್ರ ಯೋಜನೆಯನ್ನು ಪ್ರಾರಂಭಿಸುತ್ತಿದೆ ಎಂದಿದ್ದಾರೆ.
ಮಲೇರಿಯಾ ಪ್ರಕರಣಗಳ ಕುರಿತು ಮಾತನಾಡಿದ ಆರೋಗ್ಯ ಸಚಿವರು, 2015 ರಿಂದ ದೇಶದಲ್ಲಿ ಮಲೇರಿಯಾ ಪ್ರಕರಣಗಳಲ್ಲಿ ಶೇಕಡಾ 86 ರಷ್ಟು ಇಳಿಕೆಯಾಗಿದೆ ಮತ್ತು ಮಲೇರಿಯಾದಿಂದ ಸಾವು ಶೇಕಡಾ 79 ರಷ್ಟು ಇಳಿಕೆಯಾಗಿದೆ ಎಂದು ಮಾಹಿತಿ ನೀಡಿದರು. ಮಲೇರಿಯಾವನ್ನು ತೊಡೆದುಹಾಕಲು ಎಲ್ಲರ ಸಾಮೂಹಿಕ ಪ್ರಯತ್ನಗಳಿಗೆ ಕರೆ ನೀಡಿದರು.
ದೇಶವು ಶೀಘ್ರದಲ್ಲೇ ಮಲೇರಿಯಾ ವಿರುದ್ಧ ಸ್ಥಳೀಯ ಲಸಿಕೆಯನ್ನು ಹೊರತರಲಿದೆ ಎಂದು ಅವರು ತಿಳಿಸಿದರು. ಲಸಿಕೆ ಕುರಿತು ಸಂಶೋಧನೆ ನಡೆಯುತ್ತಿದೆ ಎಂದರು.
ಈಗ ಭಾರತ ಬದಲಾಗಿದೆ ಮತ್ತು ಬೇಡಿಕೆ ಬಂದಾಗ ದೇಶದ ಅವಶ್ಯಕತೆಗಳನ್ನು ಪೂರೈಸಲು ಭಾರತೀಯ ವಿಜ್ಞಾನಿಗಳು ಸಾಕಷ್ಟು ಸಮರ್ಥರಾಗಿದ್ದಾರೆ ಎಂದು ಆರೋಗ್ಯ ಸಚಿವರು ಹೇಳಿದರು.
ಇಂದು ವಿಶ್ವ ಮಲೇರಿಯಾ ದಿನವನ್ನು ಆಚರಿಸಲಾಗುತ್ತಿದೆ. ಮಲೇರಿಯಾ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ನಿರಂತರ ಹೂಡಿಕೆ ಮತ್ತು ನಿರಂತರ ರಾಜಕೀಯ ಬದ್ಧತೆಯ ಅಗತ್ಯವನ್ನು ಎತ್ತಿ ತೋರಿಸಲು ಈ ದಿನವನ್ನು ಆಚರಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.