ಕೋಲ್ಕತ್ತಾ: ಪಶ್ಚಿಮಬಂಗಾಳದಲ್ಲಿ ಕೊಲೆಯಾದ ಬಿಜೆಪಿ ಕಾರ್ಯಕರ್ತ ಅರ್ಜುನ್ ಚೌರಾಸಿಯಾ ಅವರ ಕುಟುಂಬವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಶಿಪುರದಲ್ಲಿ ಭೇಟಿಯಾದರು. ಪ್ರಸ್ತುತ ಪಶ್ಚಿಮಬಂಗಾಳ ಪ್ರವಾಸದಲ್ಲಿರುವ ಶಾ ಅವರು ಬಿಜೆಪಿ ನಾಯಕನ ಹತ್ಯೆಯ ಹಿನ್ನೆಲೆಯಲ್ಲಿ ಯಾವುದೇ ಸ್ವಾಗತ ಕಾರ್ಯಕ್ರಮವನ್ನು ನಡೆಸದಂತೆ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.
“ಬಿಜೆವೈಎಂ ನಾಯಕ ಅರ್ಜುನ್ ಚೌರಾಸಿಯಾ ಅವರ ಹತ್ಯೆಯ ಹಿಂದೆ ಇರುವವರಿಗೆ ಶಿಕ್ಷೆಯಾಗುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ” ಎಂದು ಶಾ ಹೇಳಿದ್ದಾರೆ
“ನಿನ್ನೆ ಟಿಎಂಸಿ ಸರ್ಕಾರ ತನ್ನ ಅಧಿಕಾರಾವಧಿಯ ಒಂದು ವರ್ಷವನ್ನು ಪೂರೈಸಿದೆ. ರಾಜ್ಯದಲ್ಲಿ ಇಂದು ರಾಜಕೀಯ ಕೊಲೆಗಳು ಆರಂಭವಾಗಿವೆ. ಅರ್ಜುನ್ ಚೌರಾಸಿಯಾ ಹತ್ಯೆಯನ್ನು ಬಿಜೆಪಿ ಖಂಡಿಸುತ್ತದೆ. ನಾನು ದುಃಖಿತ ಕುಟುಂಬವನ್ನು ಭೇಟಿಯಾದೆ, ಅವರ ಅಜ್ಜಿಯನ್ನು ಸಹ ಹೊಡೆಯಲಾಗಿದೆ. ಘಟನೆಯ ಕುರಿತು ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯಿಸುತ್ತದೆ” ಎಂದಿದ್ದಾರೆ.
ಮುಂಜಾನೆ, ಕಾಶಿಪುರದಲ್ಲಿ ಬಿಜೆಪಿ ಕಾರ್ಯಕರ್ತ ಅರ್ಜುನ್ ಚೌರಾಸಿಯಾ ಶವವಾಗಿ ಪತ್ತೆಯಾದ ಸ್ಥಳದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಪೊಲೀಸರು ಪ್ರತಿಭಟನಾಕಾರರನ್ನು ಸ್ಥಳದಿಂದ ಹೊರಹಾಕಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ತೆಗದುಕೊಂಡು ಹೋಗಲು ಪ್ರತಿಭಟನಾಕಾರರು ಅವಕಾಶ ನೀಡುತ್ತಿಲ್ಲ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.