ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಜಮ್ಮು ಮತ್ತು ಕಾಶ್ಮೀರವು ಅಭೂತಪೂರ್ವ ಕೈಗಾರಿಕಾ ಹೂಡಿಕೆಗಳಿಗೆ ಸಾಕ್ಷಿಯಾಗುತ್ತಿದೆ ಮತ್ತು ಕೈಗಾರಿಕಾ ಬೆಳವಣಿಗೆಯ ಪರಿಣಾಮವು ಶೀಘ್ರದಲ್ಲೇ ಇತರ ಕ್ಷೇತ್ರಗಳಲ್ಲಿಯೂ ಪ್ರತಿಫಲಿಸುತ್ತದೆ ಎಂದು ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಹೇಳಿದ್ದಾರೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದಲ್ಲಿರುವ ಇಸ್ಲಾಮಿಕ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ (IUST) ನಿನ್ನೆ ರಾಷ್ಟ್ರೀಯ ಅಕಾಡೆಮಿ-ಇಂಡಸ್ಟ್ರಿಯಲ್ ಕಾನ್ಕ್ಲೇವ್ ಅನ್ನು ಉದ್ದೇಶಿಸಿ ಮನೋಜ್ ಸಿನ್ಹಾ ಮಾತನಾಡಿದರು.
ಆರ್ಥಿಕ ಬೆಳವಣಿಗೆಗೆ ಸ್ಟಾರ್ಟ್ಅಪ್ಗಳು ನಿಜವಾದ ಗೇಮ್ ಚೇಂಜರ್ಸ್ ಆಗಿವೆ ಎಂದ ಅವರು, ಅದ್ಭುತ ಆಲೋಚನೆಗಳು ಮತ್ತು ಪರಿಹಾರಗಳಿಗೆ ಇನ್ಕ್ಯುಬೇಷನ್ ಮತ್ತು ಸೀಡ್ ಫಂಡಿಂಗ್ ಬೆಂಬಲವನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ನಾವೀನ್ಯತೆ ಮತ್ತು ಸ್ಟಾರ್ಟ್ಅಪ್ಗಳನ್ನು ಪೋಷಿಸಲು ಬಲವಾದ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವುದು ನಮ್ಮ ಗುರಿಯಾಗಿದೆ ಎಂದು ಅವರು ಹೇಳಿದರು.
ಯುವ ಉದ್ಯಮಿಗಳನ್ನು ಪ್ರೋತ್ಸಾಹಿಸಲು ಮತ್ತು ಉದ್ಯೋಗ ಸೃಷ್ಟಿಗೆ ಚಾಲನೆ ನೀಡಲು ಕೈಗೆಟುಕುವಿಕೆ, ನವೀನ ಉತ್ಪನ್ನಗಳ ಸುಸ್ಥಿರತೆ, ಉದ್ಯಮದ ಇನ್ನೋವೇಶನ್ ಕ್ಲಸ್ಟರ್ಗಳ ರಚನೆಯ ಮೇಲೆ ಕೇಂದ್ರೀಕರಿಸಲು ಲೆಫ್ಟಿನೆಂಟ್ ಗವರ್ನರ್ ಎಲ್ಲಾ ಪಾಲುದಾರರಿಗೆ ಮನವಿ ಮಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.