ನವದೆಹಲಿ: 2022 ರಲ್ಲಿ ಬಿಕ್ಕಟ್ಟು ಪೀಡಿತ ಶ್ರೀಲಂಕಾಕ್ಕೆ ಭಾರತವು $ 3.5 ಶತಕೋಟಿ ಮೌಲ್ಯದ ಬೆಂಬಲವನ್ನು ನೀಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಹೇಳಿದೆ.
ಶ್ರೀಲಂಕಾದಲ್ಲಿನ ಬೆಳವಣಿಗೆಗಳ ಕುರಿತು ಮಾಧ್ಯಮದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಶ್ರೀಲಂಕಾದ ಪ್ರಜಾಪ್ರಭುತ್ವ, ಸ್ಥಿರತೆ ಮತ್ತು ಆರ್ಥಿಕ ಚೇತರಿಕೆಗೆ ಭಾರತವು ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಹೇಳಿದೆ.
“ಶ್ರೀಲಂಕಾದ ನಿಕಟ ನೆರೆಯ ರಾಷ್ಟ್ರವಾಗಿ, ಐತಿಹಾಸಿಕ ಸಂಬಂಧಗಳೊಂದಿಗೆ, ಭಾರತವು ಅದರ ಪ್ರಜಾಪ್ರಭುತ್ವ, ಸ್ಥಿರತೆ ಮತ್ತು ಆರ್ಥಿಕ ಚೇತರಿಕೆಗೆ ಸಂಪೂರ್ಣ ಬೆಂಬಲವನ್ನು ನೀಡುತ್ತದೆ” ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಾಗ್ಚಿ ಏಿಹೇಳಿಕೆಯಲ್ಲಿ ತಿಳಿಸಿದ್ದಾರೆ.
“ನಮ್ಮ ನೈಬರ್ಹುಡ್ ಫಸ್ಟ್ ನೀತಿಗೆ ಅನುಗುಣವಾಗಿ, ಶ್ರೀಲಂಕಾದ ಜನರಿಗೆ ಅವರ ಪ್ರಸ್ತುತ ತೊಂದರೆಗಳನ್ನು ನಿವಾರಿಸಲು ಸಹಾಯ ಮಾಡಲು ಭಾರತವು ಈ ವರ್ಷವೇ US $ 3.5 ಶತಕೋಟಿ ಮೌಲ್ಯದ ಬೆಂಬಲವನ್ನು ವಿಸ್ತರಿಸಿದೆ” ಎಂದು ಅವರು ಹೇಳಿದ್ದಾರೆ.
“ಇದಲ್ಲದೆ, ಆಹಾರ, ಔಷಧಿ ಮುಂತಾದ ಅಗತ್ಯ ವಸ್ತುಗಳ ಕೊರತೆಯನ್ನು ತಗ್ಗಿಸಲು ಭಾರತದ ಜನರು ಸಹಾಯವನ್ನು ನೀಡಿದ್ದಾರೆ” ಎಂದಿದ್ದಾರೆ.
“ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳ ಮೂಲಕ ವ್ಯಕ್ತಪಡಿಸಲಾದ ಶ್ರೀಲಂಕಾದ ಜನರ ಉತ್ತಮ ಹಿತಾಸಕ್ತಿಗಳಿಂದ ಭಾರತವು ಯಾವಾಗಲೂ ಮಾರ್ಗದರ್ಶಿಸಲ್ಪಡುತ್ತದೆ” ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.