ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪಕ ಡಾ.ಕೇಶವ ಬಲಿರಾಮ್ ಹೆಡ್ಗೇವಾರ್ ಅವರ ಭಾಷಣವನ್ನು 10 ನೇ ತರಗತಿಯ ವಿದ್ಯಾರ್ಥಿಗಳ ಕನ್ನಡ ಪಠ್ಯಪುಸ್ತಕದಲ್ಲಿ ಸೇರಿಸಲಾಗುವುದು ಎಂದು ಕರ್ನಾಟಕ ಶಿಕ್ಷಣ ಇಲಾಖೆ ತಿಳಿಸಿದೆ.
ಬರಹಗಾರ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯು ಹೆಡ್ಗೇವಾರ್ ಅವರ ಭಾಷಣದ ಪಠ್ಯವನ್ನು ಪಠ್ಯಕ್ರಮದಲ್ಲಿ ಅಳವಡಿಸಲು ಪ್ರಸ್ತಾಪಿಸಿತ್ತು.
“ನಿಜವಾದ ಆದರ್ಶ ಪುರುಷ ಯಾರಾಗಬೇಕು?” ಎಂಬುದು ಪಾಠದ ಶೀರ್ಷಿಕೆಯಾಗಿದೆ. ಇದು ಈಗ ಮುದ್ರಿಸಲಾಗುತ್ತಿರುವ ಕನ್ನಡ ಗದ್ಯ ಪಠ್ಯಪುಸ್ತಕದ 5 ನೇ ಪುಟದಲ್ಲಿದೆ. ಮಾರ್ಚ್ನಲ್ಲಿ ಸಮಿತಿಯು ತನ್ನ ಅಂತಿಮ ವರದಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿತ್ತು.
ಅನೇಕ ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳು ಹೆಡ್ಗೇವಾರ್ ಅವರ ಭಾಷಣದ ಅಧ್ಯಾಯವನ್ನು ಸೇರಿಸುವ ನಿರ್ಧಾರದ ವಿರುದ್ಧ ಪ್ರತಿಭಟಿಸಿವೆ, ಆದರೆ ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.
“ಕೆಲವರು ಎಲ್ಲವನ್ನೂ ವಿರೋಧಿಸಲು ಬಯಸುತ್ತಾರೆ ಮತ್ತು ಅವರು ಹೇಳಿದ್ದು ಮಾತ್ರ ಸತ್ಯ ಮತ್ತು ಅದನ್ನೇ ಸಮಾಜಕ್ಕೆ ಹೇಳಬೇಕು ಎಂಬುದು ಅವರ ಭಾವನೆಯಾಗಿರುತ್ತದೆ. ಹೆಡ್ಗೇವಾರ್ ಅವರು ಆ ಭಾಷಣದಲ್ಲಿ, ಸಿದ್ಧಾಂತ, ಮೌಲ್ಯಗಳು ಮತ್ತು ತತ್ವಗಳನ್ನು ಸ್ಫೂರ್ತಿಯಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದ್ದರು. ಸಮಾಜ ಮತ್ತು ರಾಷ್ಟ್ರದ ಮಹತ್ವದ ಬಗ್ಗೆ ಮಾತನಾಡಿದ್ದರು. ಅದರಲ್ಲಿ ಏನು ತಪ್ಪಿದೆ?” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.