ಮಥುರಾ: ಜ್ಞಾನವಾಪಿ ಮಸೀದಿ ಸಂಕೀರ್ಣದ ನ್ಯಾಯಾಲಯದ ಆದೇಶದ ವೀಡಿಯೊಗ್ರಫಿ ಸಮೀಕ್ಷೆಯ ಕುರಿತು ನಡೆಯುತ್ತಿರುವ ಚರ್ಚೆಯ ನಡುವೆಯೇ, ಕೃಷ್ಣ ಜನ್ಮಭೂಮಿಯ ಪಕ್ಕದಲ್ಲಿರುವ ಶಾಹಿ ಈದ್ಗಾ ಮಸೀದಿಯ ತೆರವಿಗಾಗಿ ಕೋರಿ ಸಲ್ಲಿಸಲಾದ ಮನವಿಯನ್ನು ಆಲಿಸಲು ಅಲ್ಲಿನ ಸಿವಿಲ್ ನ್ಯಾಯಾಲಯವು ಒಪ್ಪಿಗೆ ನೀಡಿದೆ.
ಕೃಷ್ಣನ ಜನ್ಮಸ್ಥಳ ಮಥುರಾದಲ್ಲಿನ ಶಾಹಿ ಈದ್ಗಾದ ತೆರವು ಕೋರಿ ಇತ್ತೀಚೆಗೆ ಮಥುರಾ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಲಾಗಿದೆ.
ಮಸೀದಿ ಆವರಣದಲ್ಲಿ ‘ಹಿಂದೂ ಕಲಾಕೃತಿಗಳು’ ಮತ್ತು ‘ಪ್ರಾಚೀನ ಧಾರ್ಮಿಕ ಶಾಸನಗಳು’ ಇವೆಯೇ ಅಥವಾ ಇಲ್ಲವೇ ಎಂಬುದನ್ನು ಕಂಡುಹಿಡಿಯಲು ವೀಡಿಯೊ ಸಮೀಕ್ಷೆಯನ್ನು ನಡೆಸಬೇಕು ಎಂದು ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.
ಅರ್ಜಿ ವಿಚಾರಣೆಗೆ ನ್ಯಾಯಾಲಯ ಮನವಿ ಮಾಡಿದೆ. ಕೃಷ್ಣ ಜನ್ಮಭೂಮಿ ಬಳಿಯಿರುವ ಶಾಹಿ ಈದ್ಗಾ ಮಸೀದಿಗೆ ಮೊಹರು ಹಾಕುವ ಮನವಿಯನ್ನು ಕೂಡ ಮಥುರಾ ನ್ಯಾಯಾಲಯವು ಅಂಗೀಕರಿಸಿದೆ.
Shri Krishna Janmabhoomi-Shahi Idgah Masjid dispute | Mathura district court allows hearing of lawsuit in lower court over removal of Shahi Idgah Masjid #UttarPradesh
— ANI (@ANI) May 19, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.