ನವದೆಹಲಿ: ಜೈಪುರದಲ್ಲಿ ಇಂದು ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ್ದಾರೆ ಮತ್ತು ಪಕ್ಷದ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ.
“ನಾವು ಮುಂದಿನ 25 ವರ್ಷಗಳಿಗೆ ಗುರಿಯನ್ನು ನಿಗದಿಪಡಿಸುತ್ತಿದ್ದೇವೆ, ಇದು ಬಿಜೆಪಿಗೆ ಮುಂದಿನ 25 ವರ್ಷಗಳ ಗುರಿಗಳನ್ನು ನಿಗದಿಪಡಿಸುವ ಸಮಯವಾಗಿದೆ ಮತ್ತು ಎಲ್ಲಾ ಸವಾಲುಗಳನ್ನು ಎದುರಿಸಿ ಮುನ್ನಡೆದು ಭಾರತದ ಜನರ ಆಕಾಂಕ್ಷೆಗಳನ್ನು ಈಡೇರಿಸಲು ಸತತವಾಗಿ ಕೆಲಸ ಮಾಡಬೇಕಿದೆ” ಎಂದಿದ್ದಾರೆ.
“ಭಾರತವನ್ನು ಆಕಾಂಕ್ಷೆಗಳಿಂದ ತುಂಬಿದ ದೇಶವಾಗಿ ನೋಡಲಾಗುತ್ತಿದೆ. ಈಗ, ಭಾರತದ ಪ್ರತಿಯೊಬ್ಬ ನಾಗರಿಕನು ಅಂತಿಮ ಫಲಿತಾಂಶವನ್ನು ವೀಕ್ಷಿಸುವುದರೊಂದಿಗೆ ಕೆಲಸ ಮಾಡುವುದನ್ನು ನೋಡಲು ಬಯಸುತ್ತಾನೆ. ಈ ಹಿನ್ನೆಲೆಯಲ್ಲಿ, ಸರ್ಕಾರಗಳ ಜವಾಬ್ದಾರಿಯು ಮಹತ್ತರವಾಗಿ ಹೆಚ್ಚಾಗುತ್ತದೆ” ಎಂದಿದ್ದಾರೆ.
ರಾಷ್ಟ್ರೀಯ ಉಪಾಧ್ಯಕ್ಷರು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ರಾಷ್ಟ್ರೀಯ ಕಾರ್ಯದರ್ಶಿಗಳು, ರಾಷ್ಟ್ರೀಯ ಖಜಾಂಚಿ, ಎಲ್ಲಾ ಮೋರ್ಚಾಗಳ ಅಧ್ಯಕ್ಷರು, ಎಲ್ಲಾ ರಾಜ್ಯಗಳ ಬಿಜೆಪಿ ಅಧ್ಯಕ್ಷರು, ರಾಜ್ಯ ಸಂಘಟನಾ ಕಾರ್ಯದರ್ಶಿಗಳು ಮತ್ತು ಅನೇಕ ಮಾಜಿ ಮುಖ್ಯಮಂತ್ರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದಾರೆ.
ರಾಷ್ಟ್ರೀಯ ಪದಾಧಿಕಾರಿಗಳ ಸಭೆಯಲ್ಲಿ ಒಟ್ಟು ನಾಲ್ಕು ಸೆಷನ್ಸ್ ಇರುತ್ತವೆ. ಸಭೆಯ ನಂತರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸುಂದರ್ ಸಿಂಗ್ ಭಂಡಾರಿ ಕುರಿತ ಪುಸ್ತಕ ಬಿಡುಗಡೆ ಮಾಡಿ ಜನರೊಂದಿಗೆ ಸಂವಾದ ನಡೆಸಲಿದ್ದಾರೆ.
ನಾಳೆ ಪಕ್ಷದ ಎಲ್ಲಾ ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳ – ಸಂಘಟನೆಯ ಸಭೆ ಇರುತ್ತದೆ. ಈ ಸಭೆಯಲ್ಲಿ ಭಾಗವಹಿಸಲು ದೇಶಾದ್ಯಂತ ಪಕ್ಷದ ಸುಮಾರು 130 ಹಿರಿಯ ನಾಯಕರು ಜೈಪುರ ತಲುಪಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ 12 ರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಯ ಕಾರ್ಯತಂತ್ರದ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಇದಲ್ಲದೇ ಸಂಘಟನೆಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.