ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಜೂನ್ ಮೂರನೇ ವಾರದಲ್ಲಿ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಟ್ವಿಟ್ ಮಾಡಿ ಮಾಹಿತಿ ನೀಡಿದ್ದಾರೆ.
ನಿನ್ನೆ ಹತ್ತನೇ ತರಗತಿ ಫಲಿತಾಂಶ ಪ್ರಕಟಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಕೂಡ ವಿಷಯ ತಿಳಿಸಿದ್ದಾರೆ.
ಇದೇ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಲಿದ್ದು, ಜೂನ್ 16ರೊಳಗೆ ಮೌಲ್ಯಮಾಪನ ಮುಗಿಯಲಿದೆ. ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಮೌಲ್ಯಮಾಪಕರ ಸಂಭಾವನೆ ಹೆಚ್ಚಿಸುವ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಬಾರಿ ಪಿಯುಸಿ ಪರೀಕ್ಷೆಯನ್ನು ಒಟ್ಟು 6,84,255 ವಿದ್ಯಾರ್ಥಿಗಳು ಎದುರಿಸಿದ್ದಾರೆ. ಇದರಲ್ಲಿ ಬಾಲಕರು-3,46,936, ಬಾಲಕಿಯರು-3,37,319 ಇದ್ದರೆ, ಒಟ್ಟಾರೆ ರೆಗ್ಯುಲರ್ ವಿದ್ಯಾರ್ಥಿಗಳು-6,00,519, ಪುನರಾವರ್ತಿತ ವಿದ್ಯಾರ್ಥಿಗಳು- 61,808, ಖಾಸಗಿ ವಿದ್ಯಾರ್ಥಿಗಳು – 21,928 ಜನ ಪರೀಕ್ಷೆ ಬರೆದಿದ್ದಾರೆ.
✅ ದ್ವಿತೀಯ ಪಿಯು ಪರೀಕ್ಷೆ ಸುಸೂತ್ರವಾಗಿ ಮುಗಿದಿದೆ.
✅ ಮುಂದಿನ ವಾರದಿಂದ ಮೌಲ್ಯಮಾಪನ ಆರಂಭವಾಗುತ್ತದೆ.
✅ ಜೂನ್ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ.#PUCKarnataka
— B.C Nagesh (@BCNagesh_bjp) May 20, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.