ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಸೋಮವಾರ ಚದೂರ ತಹಸಿಲ್ ಕಚೇರಿಯ ಉದ್ಯೋಗಿಯಾಗಿದ್ದ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಅವರ ಹತ್ಯೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವವರನ್ನು ಭೇಟಿ ಮಾಡಿದರು..
ಮೇ 12 ರಂದು ರಾಹುಲ್ ಭಟ್ ಅವರು ತಮ್ಮ ಕಚೇರಿಯಲ್ಲಿ ಭಯೋತ್ಪಾದಕರ ಗುಂಡಿಗೆ ಬಲಿಯಾದರು ಮತ್ತು ಅಂದಿನಿಂದ ಕಾಶ್ಮೀರಿ ಪಂಡಿತರು ತಮ್ಮ ಸುರಕ್ಷಿತೆಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರನ್ನು ಭೇಟಿಯಾದ ಗವರ್ನರ್ ಕುಂದುಕೊರತೆಗಳನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ.
ಆದರೆ, ಪ್ರತಿಭಟನಾಕಾರರು ಇನ್ನೂ ಧರಣಿ ಹಿಂಪಡೆದಿಲ್ಲ ಮತ್ತು ತಮ್ಮ ಮತ್ತು ಸರ್ಕಾರದ ನಡುವಿನ ಮಾತುಕತೆ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ. ಕಾಶ್ಮೀರಿ ಪಂಡಿತ ಪ್ರತಿಭಟನಾಕಾರರು ಕಾಶ್ಮೀರದ ಹೊರಗಡೆ ತಮಗೆ ಸುರಕ್ಷಿತ ಸ್ಥಳ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ.
”ಮಾತುಕತೆ ಮುಂದುವರಿಯಲಿದೆ. ಕಾಶ್ಮೀರ ಕಣಿವೆಯ ಹೊರಗಿರುವ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರದ ಬೇಡಿಕೆ ಈಡೇರುವವರೆಗೆ ಕರ್ತವ್ಯಕ್ಕೆ ಸೇರುವುದಿಲ್ಲ. ಪ್ರತಿಭಟನೆ ಮುಂದುವರಿಯಲಿದೆ” ಎಂದು ಕಾಶ್ಮೀರಿ ಪಂಡಿತ್ ಉದ್ಯೋಗಿಯೊಬ್ಬರು ಎಲ್ಜಿ ಮನೋಜ್ ಸಿನ್ಹಾ ಅವರನ್ನು ಭೇಟಿಯಾದ ನಂತರ ಹೇಳಿದ್ದಾರೆ.
Budgam (J&K): LG Manoj Sinha met Kashmiri Pandits who staged protests against the killing of Chadoora Tehsil Office employee Rahul Bhat
Bhat was shot dead by terrorists on May 12 in his office.
"LG assured us that he will look into our grievances," a local said pic.twitter.com/JBnB8PtrmL
— ANI (@ANI) May 23, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.