ನವದೆಹಲಿ: ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವು ಅಧಿಕಾರಕ್ಕೆ ಬಂದು ಇಂದಿಗೆ ಎಂಟು ವರ್ಷಗಳನ್ನು ಪೂರೈಸಿದೆ. ತನ್ನ ಎಂಟು ವರ್ಷಗಳ ಅಧಿಕಾರಾವಧಿಯಲ್ಲಿ, ಮೋದಿ ಸರ್ಕಾರವು ಜನಪರವಾದ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸಿ ದೇಶದಲ್ಲಿ ಮಹತ್ತರವಾದ ಬದಲಾವಣೆಯನ್ನು ತಂದಿದೆ.
ಮೋದಿ ಸರ್ಕಾರದ ಎಂಟು ವರ್ಷಗಳನ್ನು ಗುರುತಿಸಲು ಬಿಜೆಪಿ ಮೇ 30 ಮತ್ತು ಜೂನ್ 15 ರ ನಡುವೆ ದೇಶಾದ್ಯಂತ ಕಾರ್ಯಕ್ರಮಗಳನ್ನು ಯೋಜಿಸಿದೆ. ಅಲ್ಪಸಂಖ್ಯಾತರು, ಬಡವರು, ದುರ್ಬಲ ಸಮುದಾಯಗಳು, ಯುವಕರು ಮತ್ತು ಮಹಿಳೆಯರನ್ನು ತಲುಪಲು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ.
ಅಲ್ಲದೇ ಮೋದಿ ಸರ್ಕಾರದ 8 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಬಿಜೆಪಿ ಸಚಿವರು, ಸಂಸದರು ಮತ್ತು ಶಾಸಕರು ಹುತಾತ್ಮ ಯೋಧರ ಕುಟುಂಬಗಳನ್ನು ದತ್ತು ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಕ್ಷ ದುರ್ಬಲವಾಗಿರುವ 73000 ಬೂತ್ಗಳಲ್ಲಿ ಪಕ್ಷವನ್ನು ಬಲಪಡಿಸುವ ಅಭಿಯಾನವನ್ನೂ ಈ ಸಂದರ್ಭದಲ್ಲಿ ಬಿಜೆಪಿ ಆರಂಭಿಸಲಿದೆ.
ರೈತರು, ಇತರೆ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಸರ್ಕಾರದ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದಕ್ಕಾಗಿ ಹತ್ತು ದಿನಗಳನ್ನು ಮೀಸಲಿಡಲಾಗಿದೆ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.
ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರು 75 ಗಂಟೆಗಳ ಸಾರ್ವಜನಿಕ ಸಂವಾದವನ್ನು ಯೋಜಿಸಲು ಮತ್ತು ಸರ್ಕಾರದ ಯೋಜನೆಗಳ ಫಲಾನುಭವಿಗಳೊಂದಿಗೆ ಸಭೆಗಳನ್ನು ನಡೆಸಲು ಪಕ್ಷದ ನಾಯಕರಿಗೆ ಸೂಚನೆ ನೀಡಿದ್ದಾರೆ. ಕಳೆದ ಎಂಟು ವರ್ಷಗಳಲ್ಲಿ ಜಾರಿಗೆ ತಂದ ಜನಪರ ಯೋಜನೆಗಳು ಮತ್ತು ನೀತಿಗಳ ಪಟ್ಟಿಯ ವರದಿಯನ್ನು ಬಿಡುಗಡೆ ಮಾಡಲು ಅವರು ಯೋಜಿಸಿದ್ದಾರೆ.
ಜೂನ್ ಮೂರನೇ ವಾರದಲ್ಲಿ ಧರ್ಮಶಾಲಾದಲ್ಲಿ ನಡೆಯಲಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳ ಎರಡು ದಿನಗಳ ಸಮಾವೇಶದಲ್ಲಿ ಮೋದಿ ಭಾಗವಹಿಸಲಿದ್ದಾರೆ. ಜೂನ್ 16-17 ರಂದು ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಮೋದಿ ಉಪಸ್ಥಿತಿಯು ಮಹತ್ವದ್ದಾಗಿದೆ ಎಂದು ಬಿಜೆಪಿ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.