ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಮ್ಮ ಸರ್ಕಾರದ ಎಂಟನೇ ವಾರ್ಷಿಕೋತ್ಸವದ ಅಂಗವಾಗಿ ಶಿಮ್ಲಾದ ರಿಡ್ಜ್ ಮೈದಾನದಲ್ಲಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.
‘ಗರೀಬ್ ಕಲ್ಯಾಣ್ ಸಮ್ಮೇಳನ’ವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಕಳೆದ ಎಂಟು ವರ್ಷಗಳಲ್ಲಿ ಒಮ್ಮೆಯೂ ನಾನು ನನ್ನನ್ನು ಪ್ರಧಾನಿಯಾಗಿ ನೋಡಿಲ್ಲ, ಕೇವಲ ದಾಖಲೆಗಳಿಗೆ ಸಹಿ ಹಾಕಬೇಕಾದಾಗ ಮಾತ್ರ ಪ್ರಧಾನಿಯಾಗಿ ಸಹಿ ಹಾಕತ್ತೇನೆ ಎಂದಿದ್ದಾರೆ.
“ಕಳೆದ 8 ವರ್ಷಗಳಲ್ಲಿ ಒಮ್ಮೆಯೂ ನಾನು ನನ್ನನ್ನು ಪ್ರಧಾನಿ ಎಂದು ಕಲ್ಪಿಸಿಕೊಂಡಿರಲಿಲ್ಲ. ನಾನು ದಾಖಲೆಗಳಿಗೆ ಸಹಿ ಹಾಕಿದಾಗ ಮಾತ್ರ ನನಗೆ ಪ್ರಧಾನ ಮಂತ್ರಿಯ ಜವಾಬ್ದಾರಿ ಇರುತ್ತದೆ ಆದರೆ ಫೈಲ್ ಹೋದ ತಕ್ಷಣ, ನಾನು ಇನ್ನು ಮುಂದೆ ಪ್ರಧಾನಿ ಅಲ್ಲ, ನಾನು ಕೇವಲ 130 ಕೋಟಿ ಜನರ ಪ್ರಧಾನ ಸೇವಕ, ಜನರು ನನ್ನ ಜೀವನದಲ್ಲಿ ಎಲ್ಲವೂ ಆಗಿದ್ದಾರೆ ಮತ್ತು ನನ್ನ ಜೀವನವೂ ಜನರಿಗಾಗಿ ಇದೆ” ಎಂದು ಅವರು ಹೇಳಿದ್ದಾರೆ.
ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ 10 ಕೋಟಿಗೂ ಹೆಚ್ಚು ಫಲಾನುಭವಿ ರೈತರಿಗೆ 21,000 ಕೋಟಿ ರೂ ಬಿಡುಗಡೆ ಮಾಡಿದರು. ಇದ ಪಿಎಂ-ಕಿಸಾನ್ ಯೋಜನೆಯಡಿಯಲ್ಲಿ 11 ನೇ ಕಂತಾಗಿದೆ. ಕೇಂದ್ರದ ಎನ್ಡಿಎ ಸರ್ಕಾರದ ಎಂಟನೇ ವರ್ಷಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.
Addressing 'Garib Kalyan Sammelan' in Shimla. Watch. https://t.co/XEekMT4DYQ
— Narendra Modi (@narendramodi) May 31, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.