ನವದೆಹಲಿ: ದ್ರೌಪದಿ ಮುರ್ಮು ಮಂಗಳವಾರ ಆಡಳಿತಾರೂಢ ಎನ್ಡಿಎಯ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಅತೀವ ಸಂತಸ ವ್ಯಕ್ತಪಡಿಸಿರುವ ಅವರು, ” ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಬುಡಕಟ್ಟು ಮಹಿಳೆಯನ್ನು ಉನ್ನತ ಸ್ಥಾನಕ್ಕೆ ಆಯ್ಕೆ ಮಾಡುವ ಮೂಲಕ ಬಿಜೆಪಿಯ “ಸಬ್ಕಾ ಸಾಥ್, ಸಬ್ಕಾ ವಿಶ್ವಾಸ್” ಎಂಬ ಘೋಷಣೆಯನ್ನು ಸಾಬೀತುಪಡಿಸಿದೆ” ಎಂದು ಹೇಳಿದ್ದಾರೆ.
ಬುಡಕಟ್ಟು ನಾಯಕಿ ಮತ್ತು ಜಾರ್ಖಂಡ್ ರಾಜ್ಯಪಾಲೆ ಮುರ್ಮು ಅವರು ಎನ್ಡಿಎಯಿಂದ ಉನ್ನತ ಹುದ್ದೆಗೆ ನಾಮನಿರ್ದೇಶನಗೊಂಡಿದ್ದಾರೆ ಎಂದು ದೂರದರ್ಶನದ ಮೂಲಕ ತಿಳಿದುಕೊಂಡಾಗ ಆಶ್ಚರ್ಯ ಮತ್ತು ಸಂತೋಷವಾಯಿತು ಎಂದು ಮುರ್ಮು ಸಂತೋಷ ವ್ಯಕ್ತಪಡಿಸಿದ್ದಾರೆ.
“ನನಗೆ ಆಶ್ಚರ್ಯ ಮತ್ತು ಸಂತೋಷವಾಗಿದೆ. ದೂರದ ಮಯೂರ್ಭಂಜ್ ಜಿಲ್ಲೆಯ ಬುಡಕಟ್ಟು ಮಹಿಳೆಯಾಗಿ, ನಾನು ಉನ್ನತ ಹುದ್ದೆಗೆ ಅಭ್ಯರ್ಥಿಯಾಗುವ ಬಗ್ಗೆ ಎಂದೂ ಯೋಚಿಸಿರಲಿಲ್ಲ” ಎಂದು ಮುರ್ಮು ಒಡಿಶಾದ ರಾಯ್ರಂಗ್ಪುರ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಂದರ್ಭದಲ್ಲಿ ಹೇಳಿದ್ದಾರೆ.
ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಶೇಕಡಾ 2.8 ಕ್ಕಿಂತ ಹೆಚ್ಚು ಮತಗಳನ್ನು ಹೊಂದಿರುವ ನವೀನ್ ಪಟ್ನಾಯಕ್ ಅವರ ಬಿಜು ಜನತಾ ದಳ (ಬಿಜೆಡಿ)ದ ಬೆಂಬಲವನ್ನು ಪಡೆಯಬಹುದೇ ಎಂದು ಕೇಳಿದಾಗ, ಮುರ್ಮು ಅವರು “ಒಡಿಶಾದ ಎಲ್ಲಾ ಸದಸ್ಯರ ಬೆಂಬಲದ ಆಶಾವಾದವನ್ನು ಹೊಂದಿದ್ದೇನೆ” ಎಂದು ಹೇಳಿದರು.
“ನಾನು ಮಣ್ಣಿನ ಮಗಳು, ಒಡಿಶಾದವಳಾಗಿ ನನ್ನನ್ನು ಬೆಂಬಲಿಸುವಂತೆ ಎಲ್ಲ ಸದಸ್ಯರಲ್ಲಿ ವಿನಂತಿಸುವ ಹಕ್ಕು ನನಗಿದೆ” ಎಂದರು.
ದ್ರೌಪದಿ ಮುರ್ಮು ಮಹಾನ್ ರಾಷ್ಟ್ರಪತಿಯಾಗುತ್ತಾರೆ ಇಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ವ್ಯಕ್ತಪಡಿಸಿದ್ದಾರೆ.
ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ಡಿಎ ಅಭ್ಯರ್ಥಿ ಎಂದು ಘೋಷಿಸಿದ ನಂತರ ಜಾರ್ಖಂಡ್ ಮಾಜಿ ಗವರ್ನರ್ ದ್ರೌಪದಿ ಮುರ್ಮು ಅವರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು. ಜೀವನದಲ್ಲಿ ಕಷ್ಟಗಳನ್ನು ಎದುರಿಸಿದ ಲಕ್ಷಾಂತರ ಜನರು ಮುರ್ಮು ಅವರ ಜೀವನದಿಂದ ಶಕ್ತಿಯನ್ನು ಪಡೆದುಕೊಂಡಿದ್ದಾರೆ ಮತ್ತು ಅವರು ಮಹಾನ್ ರಾಷ್ಟ್ರಪತಿಯಾಗುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
I'm surprised and I can't believe it. I am grateful to all of you and do not wish to speak more. Whatever powers the President has in the Constitution, I will act according to it.
— draupadi murmu (@draupadimurmu22) June 22, 2022
Smt. Droupadi Murmu Ji has devoted her life to serving society and empowering the poor, downtrodden as well as the marginalised. She has rich administrative experience and had an outstanding gubernatorial tenure. I am confident she will be a great President of our nation.
— Narendra Modi (@narendramodi) June 21, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.