ನವದೆಹಲಿ: ಎನ್ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಗುರುವಾರ ರಾಷ್ಟ್ರ ರಾಜಧಾನಿ ದೆಹಲಿಗೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಈ ವೇಳೆ ಮಾತನಾಡಿದ ಮೋದಿ, ರಾಷ್ಟ್ರಪತಿ ಹುದ್ದೆಗೆ ಮುರ್ಮು ಉಮೇದುವಾರಿಕೆಯನ್ನು ಭಾರತದಾದ್ಯಂತ ಸಮಾಜದ ಎಲ್ಲಾ ವರ್ಗಗಳಿಂದ ಪ್ರಶಂಸಿಸಲಾಗಿದೆ ಎಂದರು.
ಮುರ್ಮು ಅವರು ಶುಕ್ರವಾರ ತಮ್ಮ ನಾಮಪತ್ರವನ್ನು ಸಲ್ಲಿಸುವ ನಿರೀಕ್ಷೆಯಿದೆ, ಮೋದಿ ಅವರು ಅವರ ಉಮೇದುವಾರಿಕೆಯ ಮೊದಲ ಪ್ರತಿಪಾದಕರಾಗಲಿದ್ದಾರೆ. ಕೇಂದ್ರ ಸಚಿವರು ಮತ್ತು ಇತರ ಪಕ್ಷಗಳ ಪದಾಧಿಕಾರಿಗಳು ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಸಹ ಅನುಮೋದಕರಾಗಲಿದ್ದಾರೆ.
ಟ್ವೀಟ್ ಮಾಡಿರುವ ಮೋದಿ, ”ದ್ರೌಪದಿ ಮುರ್ಮು ಜಿ ಅವರನ್ನು ಭೇಟಿಯಾದೆ. ಅವರ ರಾಷ್ಟ್ರಪತಿ ಉಮೇದುವಾರಿಕೆಯೂ ಸಮಾಜದ ಎಲ್ಲಾ ವರ್ಗಗಳಿಂದ ಭಾರತದಾದ್ಯಂತ ಮೆಚ್ಚುಗೆ ಪಡೆದಿದೆ. ತಳಮಟ್ಟದ ಸಮಸ್ಯೆಗಳ ಬಗ್ಗೆ ಅವರ ತಿಳುವಳಿಕೆ ಮತ್ತು ಭಾರತದ ಅಭಿವೃದ್ಧಿಯ ದೃಷ್ಟಿಕೋನವು ಅತ್ಯುತ್ತಮವಾಗಿದೆ” ಎಂದಿದ್ದಾರೆ.
Met Smt. Droupadi Murmu Ji. Her Presidential nomination has been appreciated across India by all sections of society. Her understanding of grassroots problems and vision for India’s development is outstanding. pic.twitter.com/4WB2LO6pu9
— Narendra Modi (@narendramodi) June 23, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.