ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಇಂದು ಬಾಲಿಯಲ್ಲಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ ಮಹತ್ವದ ವಿಷಯಗಳ ಕುರಿತು ಮಾತುಕತೆ ನಡೆಸಿದರು.
ಉಭಯ ನಾಯಕರು ಭಾರತ-ಚೀನಾ ನಡುವೆ ಬಾಕಿ ಉಳಿದಿರುವ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಜಿ20 ದೇಶಗಳ ವಿದೇಶಾಂಗ ಸಚಿವರ ಸಭೆಯ ಹಿನ್ನೆಲೆಯಲ್ಲಿ ಈ ಮಾತುಕತೆ ನಡೆದಿದೆ.
ಪೂರ್ವ ಲಡಾಖ್ ಗಡಿ ವಿವಾದ ಚರ್ಚೆಯಲ್ಲಿ ಉಲ್ಲೇಖಗೊಂಡಿದೆ ಎಂದು ತಿಳಿದುಬಂದಿದೆ.
“ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರನ್ನು ಭೇಟಿ ಮಾಡುವ ಮೂಲಕ ಬಾಲಿಯಲ್ಲಿ ನನ್ನ ದಿನವನ್ನು ಪ್ರಾರಂಭಿಸಿದೆ. ಚರ್ಚೆ ಒಂದು ಗಂಟೆ ನಡೆಯಿತು. ಗಡಿ ಪರಿಸ್ಥಿತಿಗೆ ಸಂಬಂಧಿಸಿದಂತೆ ನಮ್ಮ ದ್ವಿಪಕ್ಷೀಯ ಸಂಬಂಧದಲ್ಲಿನ ನಿರ್ದಿಷ್ಟ ಮಹೋನ್ನತ ವಿಷಯಗಳ ಮೇಲೆ ಚರ್ಚೆ ಕೇಂದ್ರೀಕರಿಸಿದೆ. ವಿದ್ಯಾರ್ಥಿಗಳು ಮತ್ತು ವಿಮಾನಗಳು ಸೇರಿದಂತೆ ಇತರ ವಿಷಯಗಳ ಬಗ್ಗೆ ಮಾತನಾಡಿದ್ದೇನೆ” ಎಂದು ಜೈಶಂಕರ್ ಟ್ವೀಟ್ ಮಾಡಿದ್ದಾರೆ.
Began my day in Bali by meeting FM Wang Yi of China. Discussion lasted one hour.
Focused on specific outstanding issues in our bilateral relationship pertaining to the border situation. Also spoke about other matters including students and flights. pic.twitter.com/NYl0Gh451v
— Dr. S. Jaishankar (@DrSJaishankar) July 7, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.