ನವದೆಹಲಿ: 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ನಾಗರಿಕರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ಪ್ರೇರೇಪಿಸಲು ಕೇಂದ್ರ ಸರ್ಕಾರ ಶೀಘ್ರದಲ್ಲೇ ಹರ್ ಘರ್ ತಿರಂಗ ಎಂಬ ರಾಷ್ಟ್ರವ್ಯಾಪಿ ಅಭಿಯಾನವನ್ನು ಪ್ರಾರಂಭಿಸಲಿದೆ.
ಆಜಾದಿ ಕಾ ಅಮೃತ್ ಮಹೋತ್ಸವದ ಅಡಿಯಲ್ಲಿ ಈ ಉಪಕ್ರಮವನ್ನು ನಡೆಸಲಾಗುತ್ತಿದೆ, ಸಂಸ್ಕೃತಿ ಸಚಿವಾಲಯವು ಈ ಅಭಿಯಾನದ ನೋಡಲ್ ಸಚಿವಾಲಯವಾಗಿದೆ.
ಭಾರತದ ರಾಷ್ಟ್ರ ಧ್ವಜವು ಇಡೀ ರಾಷ್ಟ್ರಕ್ಕೆ ರಾಷ್ಟ್ರೀಯ ಹೆಮ್ಮೆಯ ಸಂಕೇತವಾಗಿದೆ ಮತ್ತು ರಾಷ್ಟ್ರಧ್ವಜವನ್ನು ನಾಗರಿಕರು ಇನ್ನಷ್ಟು ಗೌರವಿಸಬೇಕು, ಅದರ ಬಗ್ಗೆ ಗೌರವ ಬೆಳೆಸಬೇಕು ಎಂಬ ಸದುದ್ದೇಶದೊಂದಿಗೆ ಈ ಅಭಿಯಾನವನ್ನು ಆಯೋಜನೆ ಮಾಡಲಾಗುತ್ತಿದೆ.
ಈ ಅಭಿಯಾನ ಎಲ್ಲೆಡೆ ಭಾರತೀಯರು ರಾಷ್ಟ್ರಧ್ವಜವನ್ನು ಹಾರಿಸುವಂತೆ ಉತ್ತೇಜಿಸುತ್ತದೆ. ಸ್ವಾತಂತ್ರ್ಯದ 75 ನೇ ವರ್ಷದಲ್ಲಿ ಹರ್ ಘರ್ ತಿರಂಗ ಅಭಿಯಾನವು ತ್ರಿವರ್ಣ ಧ್ವಜದೊಂದಿಗಿನ ವೈಯಕ್ತಿಕ ಸಂಪರ್ಕದ ಕಾರ್ಯ ಮಾತ್ರವಲ್ಲದೆ ರಾಷ್ಟ್ರ ನಿರ್ಮಾಣದ ನಮ್ಮ ಬದ್ಧತೆಯ ಸಾಕಾರವಾಗಿದೆ. ಜನರ ಹೃದಯದಲ್ಲಿ ದೇಶಭಕ್ತಿಯ ಭಾವನೆಯನ್ನು ಮೂಡಿಸುವುದು ಮತ್ತು ನಮ್ಮ ರಾಷ್ಟ್ರಧ್ವಜದ ಬಗ್ಗೆ ಜಾಗೃತಿ ಮೂಡಿಸುವುದು ಈ ಉಪಕ್ರಮದ ಹಿಂದಿನ ಆಲೋಚನೆಯಾಗಿದೆ ಎಂದು ಕೇಂದ್ರ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.