ಬೆಂಗಳೂರು: ತಾಂತ್ರಿಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರೌಢಶಾಲಾ ಹಂತದಲ್ಲಿ ಮಕ್ಕಳಿಗೆ ತಾಂತ್ರಿಕ ಶಿಕ್ಷಣದ ಪ್ರಾಥಮಿಕ ಜ್ಞಾನ ನೀಡಲಿದ್ದೇವೆ ಎಂದಿದ್ದಾರೆ.
ವಿಶ್ವ ಯುವ ಕೌಶಲ್ಯ ದಿನಾಚರಣೆಯಲ್ಲಿ ಇಂದು ಭಾಗವಹಿಸಿ ಮಾತನಾಡಿದ ಅವರು, ಪ್ರೌಢಶಾಲಾ ಹಂತದಲ್ಲಿ ಮಕ್ಕಳಿಗೆ ತಾಂತ್ರಿಕ ಶಿಕ್ಷಣದ ಜ್ಞಾನ ನೀಡುವುದರಿಂದ ತಂತ್ರಜ್ಞಾನದಲ್ಲಿ ಆಸಕ್ತಿಯನ್ನು ಬೆಳೆಸಲು ಅನುಕೂಲಕರವಾಗುತ್ತದೆ ಎಂದಿದ್ದಾರೆ.
ಎಂಟರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಪ್ರಾಥಮಿಕ ಜ್ಞಾನ ನೀಡಲಾಗುತ್ತದೆ. ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕವನ್ನು ದೇಶದಲ್ಲೇ ಅಗ್ರಗಣ್ಯ ಮಾಡಬೇಕು ಎಂಬುದು ನಮ್ಮ ಪ್ರಯತ್ನ ಎಂದಿದ್ದಾರೆ.
ಸ್ತ್ರೀಶಕ್ತಿ ಮೂಲಕ ಸುಮಾರು 5 ಲಕ್ಷ ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡಲು ಉದ್ದೇಶಿಸಲಾಗಿದೆ. ಇದರಿಂದ ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಸಾಧ್ಯವಾಗುತ್ತದೆ ಎಂದಿದ್ದಾರೆ.
ಕೌಶಲ್ಯವೆಂಬ ದೇವರು ಕೊಟ್ಟ ವರವನ್ನು ಜ್ಞಾನದೊಂದಿಗೆ ಜೋಡಿಸುವ ಕಾರ್ಯ ನಡೆಯಬೇಕು. ಪ್ರತಿಯೊಬ್ಬ ವ್ಯಕ್ತಿಯಲ್ಲೂ ಕೌಶಲ್ಯ ಇದ್ದೇ ಇರುತ್ತದೆ ಎಂದು ಅವರು ಹೇಳಿದ್ದಾರೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.