News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸರ್ಕಾರದಿಂದ ಸರ್ವಪಕ್ಷಗಳ ಸಭೆ: ನಾಳೆಯಿಂದ ಸಂಸತ್ತಿನ ಮಾನ್ಸೂನ್‌ ಅಧಿವೇಶನ

ನವದೆಹಲಿ: ನಾಳೆಯಿಂದ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ಸರ್ಕಾರ ಕರೆದಿರುವ ಸರ್ವಪಕ್ಷ ಸಭೆ ಇಂದು ನವದೆಹಲಿಯಲ್ಲಿ ನಡೆಯಿತು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಸಂಸದರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಜೈರಾಮ್ ರಮೇಶ್, ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯ, ರಾಷ್ಟ್ರೀಯ ಲೋಕದಳ ಸಂಸದ ಜಯಂತ್ ಚೌಧರಿ, ಡಿಎಂಕೆ ಸಂಸದ ತಿರುಚ್ಚಿ ಶಿವ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

ಸಂಸತ್ತಿನ ಉಭಯ ಸದನಗಳು ಸುಗಮವಾಗಿ ನಡೆಯಲು ಎಲ್ಲ ರಾಜಕೀಯ ಪಕ್ಷಗಳ ಸಹಕಾರ ಕೋರಲು ಸಭೆ ಕರೆಯಲಾಗಿದೆ.

ಸಭೆಯ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, 35 ರಾಜಕೀಯ ಪಕ್ಷಗಳ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು. ಅಸಂಸದೀಯ ಪದಗಳ ಪಟ್ಟಿಗೆ ಪರಿಷ್ಕರಣೆ, ಪ್ರತಿಭಟನೆ ನಿಷೇಧ ಮುಂತಾದ ವಿಷಯಗಳು ಸಭೆಯಲ್ಲಿ ಪ್ರಸ್ತಾಪವಾದವು ಎಂದು ಅವರು ಹೇಳಿದರು. ಕಾಂಗ್ರೆಸ್ ಸಮಸ್ಯೆಗಳನ್ನು ಸೃಷ್ಟಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಜೋಶಿ ಆರೋಪಿಸಿದ್ದಾರೆ.

ಸಭೆಯ ನಂತರ ಹಲವಾರು ವಿರೋಧ ಪಕ್ಷದ ನಾಯಕರು ಮಾತನಾಡಿ, ಬೆಲೆ ಏರಿಕೆ, ಅಸಂಸದೀಯ ಪದಗಳ ವಿವಾದ ಮತ್ತು ಮುಂಗಾರು ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಹಿಂಪಡೆಯುವ ಬೇಡಿಕೆಯನ್ನು ಪ್ರಸ್ತಾಪಿಸಿದ್ದಾರೆ.

ಸಭೆಯಲ್ಲಿ ರಾಜಕೀಯ ಪಕ್ಷಗಳ ಮುಖಂಡರು ಲೋಕಸಭೆ ಸ್ಪೀಕರ್ ಅವರಿಗೆ ಅಧಿವೇಶನದಲ್ಲಿ ಸದನ ಸುಗಮವಾಗಿ ನಡೆಯಲು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ನಾಳೆ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನ ಆಗಸ್ಟ್ 12 ರವರೆಗೆ ನಡೆಯಲಿದೆ . ಅಧಿವೇಶನದಲ್ಲಿ 18 ಕಲಾಪಗಳು ನಡೆಯಲಿವೆ.

ಈ ಅವಧಿಯಲ್ಲಿ ರಾಷ್ಟ್ರಪತಿ ಚುನಾವಣೆ ಮತ್ತು ಉಪರಾಷ್ಟ್ರಪತಿ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಅಧಿವೇಶನ ಮಹತ್ವ ಪಡೆದಿದೆ. ರಾಷ್ಟ್ರಪತಿ ಚುನಾವಣೆಯೂ ಸೋಮವಾರ ನಡೆಯಲಿದ್ದು, ಮುಂದಿನ ತಿಂಗಳು 6ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top