ನವದೆಹಲಿ: ಗಂಗಾ ಮತ್ತು ಅದರ ಉಪನದಿಗಳನ್ನು ಸ್ವಚ್ಛಗೊಳಿಸುವ ಉದ್ದೇಶದ ಯೋಜನೆಗಳಿಗೆ 30,000 ಕೋಟಿ ರೂ.ಗಿಂತ ಹೆಚ್ಚು ಮಂಜೂರು ಮಾಡಲಾಗಿದೆ ಎಂದು ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದ್ದಾರೆ.
ಸೀಮಿತ ಜಲಸಂಪನ್ಮೂಲಗಳ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದ ಶೇಖಾವತ್, ಆರ್ಥಿಕ ಅಭಿವೃದ್ಧಿ ನಮ್ಮ ಜಲ ಸಂಪನ್ಮೂಲ ಮತ್ತು ಶಕ್ತಿಯಿಂದಲೇ ಆರಂಭವಾಗುತ್ತದೆ ಎಂದು ಹೇಳಿದ್ದಾರೆ.
“ನಮ್ಮ ನೈಸರ್ಗಿಕ ಸಂಪನ್ಮೂಲಗಳು ಮತ್ತು ಆರ್ಥಿಕ ಅಭಿವೃದ್ಧಿಯ ಅಗತ್ಯತೆಯ ಗ್ರಾಫ್ ಒಂದೇ ಆಗಿರುತ್ತದೆ. ಭಾರತದ ಜನಸಂಖ್ಯಾ, ಭೌಗೋಳಿಕ ವೈಶಾಲ್ಯತೆ, ಸೀಮಿತ ಜಲಸಂಪನ್ಮೂಲಗಳು ಮತ್ತು ಪರಿಸರ ಸವಾಲುಗಳನ್ನು ಎದುರಿಸಲು ಇಚ್ಛೆ ಇದೆ, ನಾವು ನೀರು ಮತ್ತು ಇತರ ನೈಸರ್ಗಿಕ ಸಂಪನ್ಮೂಲಗಳ ಸಮರ್ಥನೀಯ ಬಳಕೆಯನ್ನು ಖಚಿತಪಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ” ಎಂದಿದ್ದಾರೆ.
ಗಂಗಾ ಮತ್ತು ಅದರ ಉಪನದಿಗಳನ್ನು ಸ್ವಚ್ಛಗೊಳಿಸಲು ಸಾಕಷ್ಟು ಮೂಲಸೌಕರ್ಯಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ‘ನಮಾಮಿ ಗಂಗೆ’ ಕಾರ್ಯಕ್ರಮವು ‘ಜನ ಆಂದೋಲನ’ ಆಗಿ ಪರಿವರ್ತನೆಗೊಂಡಿರುವ ಬಗ್ಗೆ ಶೇಖಾವತ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ ಮತ್ತು ಗಂಗಾ ನದಿಯ 100 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನದಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಸರಿಯಾದ ದಿಕ್ಕಿನಲ್ಲಿ ಚರ್ಚೆಗಳು ನಡೆಯುತ್ತಿವೆ, ಇದಕ್ಕೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.