ನವದೆಹಲಿ: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ನಾಗಾಲ್ಯಾಂಡ್ನಲ್ಲಿ ಸಿಎಂ ಮೈಕ್ರೋ ಫೈನಾನ್ಸ್ ಯೋಜನೆಗೆ ಚಾಲನೆ ನೀಡಿದ್ದಾರೆ. ಅಲ್ಲದೇ, 3,000 ಫಲಾನುಭವಿಗಳಿಗೆ 205 ಕೋಟಿ ರೂಪಾಯಿಗಳ ಸಾಲವನ್ನು ಹಸ್ತಾಂತರ ಮಾಡಿದ್ದಾರೆ.
ಈ ಈಶಾನ್ಯ ರಾಜ್ಯಕ್ಕೆ ತಮ್ಮ ಭೇಟಿಯ ಎರಡನೇ ದಿನವಾದ ಇಂದು ಅವರು ಸೋಮ ಜಿಲ್ಲೆಯಲ್ಲಿ ಖಾಸಗಿ ಬ್ಯಾಂಕ್ನ ಶಾಖೆಯನ್ನು ಉದ್ಘಾಟಿಸಿದರು ಮತ್ತು ಮೊಕೊಕ್ಚುಂಗ್ ಜಿಲ್ಲೆಯ ಗ್ರಾಮೀಣ ಜನರಿಗೆ ಸೇವೆ ಸಲ್ಲಿಸಲು ಮೊಬೈಲ್ ಎಟಿಎಂ ವ್ಯಾನ್ಗೆ ಹಸಿರು ನಿಶಾನೆ ತೋರಿಸಿದರು.
ನಾಗಾಲ್ಯಾಂಡ್ಗೆ ಮೂರು ದಿನಗಳ ಭೇಟಿಯಲ್ಲಿರುವ ಸೀತಾರಾಮನ್ ಅವರು ಬ್ಯಾಂಕರ್ಗಳ ಕಾನ್ಕ್ಲೇವ್/ಕ್ರೆಡಿಟ್ ಔಟ್ರೀಚ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಮತ್ತು 3,422 ಫಲಾನುಭವಿಗಳಿಗೆ 11 ಪ್ರಮುಖ ಯೋಜನೆಗಳ ಅಡಿಯಲ್ಲಿ ರೂ 205 ಕೋಟಿ ಮೌಲ್ಯದ ಸಾಲವನ್ನು ವಿಧ್ಯುಕ್ತವಾಗಿ ಹಸ್ತಾಂತರಿಸಿದರು. ಇದು 3,837 ಜನರಿಗೆ ನೀಡಬೇಕಾದ ಒಟ್ಟು 223 ಕೋಟಿ ರೂ.ಗಳ ಸಾಲದ ಭಾಗವಾಗಿದೆ.
ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ, ಕಿಸಾನ್ ಕ್ರೆಡಿಟ್ ಕಾರ್ಡ್, ಪ್ರಧಾನ ಮಂತ್ರಿ ಮುದ್ರಾ ಯೋಜನೆ, ಎಸ್ಟಿ, ಎಸ್ಸಿ ಮತ್ತು ಮಹಿಳಾ ಉದ್ಯಮಿಗಳಿಗೆ ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆ ಮತ್ತು ಬುಡಕಟ್ಟು ಜನಸಂಖ್ಯೆಯ ಜೀವನೋಪಾಯದ ಅಭಿವೃದ್ಧಿ ಸೇರಿದಂತೆ 11 ಯೋಜನೆಗಳ ಅಡಿಯಲ್ಲಿ ಸಾಲಗಳನ್ನು ನೀಡಲಾಗಿದೆ. ಗೃಹ ಸಾಲ ಮತ್ತು ವಾಹನ ಸಾಲದಂತಹ ಚಿಲ್ಲರೆ ಬ್ಯಾಂಕಿಂಗ್ ವಿಭಾಗದ ಅಡಿಯಲ್ಲಿ ಹಣವನ್ನು ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬ್ಯಾಂಕರ್ಗಳ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಸೀತಾರಾಮನ್, ಸರ್ಕಾರದ ಪ್ರತಿಯೊಂದು ಯೋಜನೆಯು ನಿಜವಾದ ಫಲಾನುಭವಿಗಳನ್ನು ತಲುಪುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು. ನಾಗಾಲ್ಯಾಂಡ್ನ ಶೇಕಡಾ 70 ರಷ್ಟು ಜನಸಂಖ್ಯೆಯು ಕೃಷಿಯಲ್ಲಿ ತೊಡಗಿಸಿಕೊಂಡಿದ್ದರೂ, ಕಿಸಾನ್ ಕ್ರೆಡಿಟ್ ಕಾರ್ಡ್ನ ಫಲಾನುಭವಿಗಳ ಸಂಖ್ಯೆ ಕೇವಲ 2.3 ಲಕ್ಷ ಎಂದು ಕೇಂದ್ರ ಸಚಿವರು ವಿಷಾದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.