ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಬುಧವಾರ ಆಸ್ಟ್ರೇಲಿಯಾದ ಎಂಟು ವಿಶ್ವವಿದ್ಯಾನಿಲಯಗಳ ಉನ್ನತ ಗುಂಪಿನ ಶೈಕ್ಷಣಿಕ ನಾಯಕರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಆಸ್ಟ್ರೇಲಿಯಾ-ಭಾರತ ಸಂಶೋಧನಾ ಸಹಯೋಗವನ್ನು ನಿರ್ಮಿಸುವ ಕುರಿತು ಚರ್ಚೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನ್ ಅವರು, ಪ್ರಧಾನಿ ನರೇಂದ್ರ ಮೋದಿಯವರ ಜೈ ಅನುಸಂಧಾನದ ಮಂತ್ರವನ್ನು ಪುನರುಚ್ಚರಿಸಿದರು. ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಎಂಬ ಘೋಷಣೆಗೆ 76 ನೇ ಸ್ವಾತಂತ್ರ್ಯ ದಿನಾಚರಣೆಯ ವೇಳೆ ಜೈ ಅನುಸಂಧಾನ್ ಅನ್ನು ಮೋದಿ ಸೇರ್ಪಡೆಗೊಳಿಸಿದ್ದರು.
ಭಾರತದೊಂದಿಗೆ ಸಂಶೋಧನಾ ಸಹಯೋಗವನ್ನು ಬಲಪಡಿಸುವುದು ಎಲ್ಲರಿಗೂ ಒಳಿತನ್ನು ಮಾಡಲಿದೆ ಎಂದು ಸಚಿವರು ಹೇಳಿದರು.
“ಭಾರತ ಮತ್ತು ಆಸ್ಟ್ರೇಲಿಯಾವು ಭರವಸೆಯ ಸಂಶೋಧನಾ ಪಾಲುದಾರಿಕೆಯನ್ನು ಹೊಂದಿದೆ. ನಮ್ಮ ಸಂಶೋಧನಾ ಸಹಯೋಗವನ್ನು ಮತ್ತಷ್ಟು ತೀವ್ರಗೊಳಿಸುವುದಕ್ಕಾಗಿ ಎಂಟು ವಿಶ್ವವಿದ್ಯಾನಿಲಯಗಳ ಗುಂಪನ್ನು ಸ್ವಾಗತಿಸುತ್ತಿದ್ದೇನೆ ಮತ್ತು ಪರಸ್ಪರ ಮತ್ತು ರಾಷ್ಟ್ರೀಯ ಆದ್ಯತೆಗಳನ್ನು ಪೂರೈಸಲು ಮತ್ತು ಜಾಗತಿಕ ಸವಾಲುಗಳಿಗೆ ಮಹತ್ಪವದರಿಹಾರಗಳನ್ನು ಒದಗಿಸಲು ಹೊಸ ಅವಕಾಶಗಳನ್ನು ಅಳವಡಿಸಿಕೊಳ್ಳುತ್ತೇವೆ” ಎಂದು ಪ್ರಧಾನ್ ಹೇಳಿದ್ದಾರೆ.
“ಭಾರತವು ಎಲ್ಲಾ ಹಂತಗಳಲ್ಲಿ ಕುತೂಹಲ-ಚಾಲಿತ ಸಂಶೋಧನೆ ಮತ್ತು ನಾವೀನ್ಯತೆಗಳನ್ನು ಹುಟ್ಟುಹಾಕಲು ಪ್ರಯತ್ನಿಸುತ್ತಿದೆ. ಭಾರತವನ್ನು ಜ್ಞಾನದ ಮಹಾಶಕ್ತಿಯಾಗಿ ಸ್ಥಾಪಿಸುವ ಆಲೋಚನೆಗಳಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.