ನವದೆಹಲಿ: ಭಾರತವು ಅರ್ಜೆಂಟೀನಾದ ವಾಯುಪಡೆಗೆ ಭಾರತ ನಿರ್ಮಿತ ತೇಜಸ್ ಯುದ್ಧ ವಿಮಾನವನ್ನು ಪೂರೈಕೆ ಮಾಡಲು ಒಪ್ಪಿಗೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.
ಅರ್ಜೆಂಟೀನಾಗೆ ಭೇಟಿ ನೀಡಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಅಲ್ಲಿನ ವಿದೇಶಾಂಗ ವ್ಯವಹಾರಗಳ ಅಂತಾರಾಷ್ಟ್ರೀಯ ವ್ಯಾಪಾರ ಮತ್ತು ಆರಾಧನಾ ಸಚಿವ ಸ್ಯಾಂಟಿಯಾಗೊ ಕಾಫಿರೊ ಅವರನ್ನು ಭೇಟಿ ಮಾಡಿದರು ಮತ್ತು ವಿವಿಧ ಕ್ಷೇತ್ರಗಳಲ್ಲಿ ಎರಡೂ ದೇಶಗಳ ನಡುವಿನ ಪಾಲುದಾರಿಕೆಯನ್ನು ಪುನರುಚ್ಚರಿಸಿದರು.
ಅಲ್ಲದೇ ತೇಜಸ್ ಅನ್ನು ತಮ್ಮ ವಾಯುಪಡೆಗೆ ಸೇರ್ಪಡೆಗೊಳಿಸುವ ಅರ್ಜೇಂಟೀನಾ ಆಸಕ್ತಿಗೆ ಸಹಮತ ಸೂಚಿಸಿದರು.
ಬಹುಪಕ್ಷೀಯ ವೇದಿಕೆಗಳಲ್ಲಿ ಉಭಯ ದೇಶಗಳ ನಡುವಿನ ನಿಕಟ ಸಹಕಾರದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ಸಚಿವರು, ಭಯೋತ್ಪಾದನೆ, ಭದ್ರತೆ, ಅಂತರರಾಷ್ಟ್ರೀಯ ಮತ್ತು ಪ್ರಾದೇಶಿಕ ಶಾಂತಿ, ಹವಾಮಾನ ಬದಲಾವಣೆ, ಜೈವಿಕ ವೈವಿಧ್ಯತೆಯ ನಷ್ಟ, ಜಾಗತಿಕ ಸವಾಲುಗಳನ್ನು ಎದುರಿಸಲು ವಿಶ್ವಸಂಸ್ಥೆ ಮತ್ತು ಇತರ ಬಹುಪಕ್ಷೀಯ ಸಂಸ್ಥೆಗಳಲ್ಲಿ ನಿಕಟವಾಗಿ ಸಹಕರಿಸಲು ಒಪ್ಪಿಕೊಂಡರು.
“ಎರಡೂ ಕಡೆಯವರು ಸಶಸ್ತ್ರ ಪಡೆಗಳ ನಡುವಿನ ಭೇಟಿಯ ವಿನಿಮಯವನ್ನು ಉತ್ತೇಜಿಸಲು ಒಪ್ಪಿಕೊಂಡರು, ರಕ್ಷಣಾ ತರಬೇತಿ ಮತ್ತು ರಕ್ಷಣಾ ಸಂಬಂಧಿತ ಉಪಕರಣಗಳ ಜಂಟಿ ಉತ್ಪಾದನೆಗೆ ಸಹಯೋಗವನ್ನು ಉತ್ತೇಜಿಸಲು ಒಪ್ಪಿಕೊಂಡು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.