ಸ್ಯಾನ್ ಫ್ರಾನ್ಸಿಸ್ಕೋ: ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಗದರ್ ಸ್ಮಾರಕಕ್ಕೆ ಸೋಮವಾರ ಭೇಟಿ ನೀಡಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭಾರತದಲ್ಲಿ ಸರ್ಕಾರ ಕೈಗೊಂಡ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದರು ಮತ್ತು ಭಾರತವು 30 ವರ್ಷಗಳಲ್ಲಿ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವ ಹಾದಿಯಲ್ಲಿದೆ ಎಂದು ಹೇಳಿದರು.
“ಭಾರತವು ವಿಶ್ವದ ಅತ್ಯಂತ ಆಕರ್ಷಕ ಹೂಡಿಕೆ ತಾಣಗಳಲ್ಲಿ ಒಂದಾಗಿದೆ ಮತ್ತು ವಿಶ್ವ ನಾಯಕರು ಮತ್ತು ಅಭಿವೃದ್ಧಿ ಹೊಂದಿದ ದೇಶಗಳು ಭಾರತದೊಂದಿಗೆ ವ್ಯಾಪಾರವನ್ನು ವಿಸ್ತರಿಸಲು ಬಯಸುತ್ತಿವೆ. ಹೆಚ್ಚಿನ ದ್ವಿಪಕ್ಷೀಯ ಒಪ್ಪಂದಗಳಿಗಾಗಿ ಭಾರತದೊಂದಿಗೆ ತಮ್ಮ ತೊಡಗಿಸಿಕೊಳ್ಳುವಿಕೆ ವಿಸ್ತರಿಸಲು ಪ್ರಯತ್ನಗಳನ್ನು ಮಾಡುತ್ತಿವೆ” ಎಂದಿದ್ದಾರೆ.
“ನಮ್ಮ ಪ್ರೀತಿಯ ಮಾತೃಭೂಮಿಗಾಗಿ ‘ಎಲ್ಲವನ್ನೂ’ ತ್ಯಾಗ ಮಾಡಿದ ನಮ್ಮ ಪೂರ್ವಜರಿಗೆ ಆಳವಾದ ಕೃತಜ್ಞತೆಯ ಭಾವದೊಂದಿಗೆ ನಾನು ಇಂದು ಗದರ್ ಸ್ಮಾರಕದಲ್ಲಿ ನಿಂತಿದ್ದೇನೆ. ಅಭಿವೃದ್ಧಿ ಹೊಂದಿದ ಮತ್ತು ಸಮೃದ್ಧ ರಾಷ್ಟ್ರವಾಗಲು ‘ಅಮೃತ್ ಕಾಲ’ದಲ್ಲಿ ಭಾರತಕ್ಕೆ ಸೇವೆ ಸಲ್ಲಿಸಲು ನಾನು ಪ್ರತಿಜ್ಞೆ ಮಾಡುತ್ತೇನೆ” ಎಂದಿದ್ದಾರೆ.
ಗದರ್ ಪಕ್ಷದ ಸದಸ್ಯರ ಸ್ಮರಣಾರ್ಥ ಗದರ್ ಸ್ಮಾರಕವನ್ನು ನಿರ್ಮಿಸಲಾಗಿದೆ. ಬ್ರಿಟಿಷ್ ರಾಜ್ ಸಮಯದಲ್ಲಿ ಇವರು ಭಾರತೀಯರಾಗಿದ್ದರು ಮತ್ತು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನೆಲೆಸಿ ಬ್ರಿಟಿಷರ ವಿರುದ್ಧ ಬಂಡಾಯವೆದ್ದಿದ್ದರು. ಇದಕ್ಕೂ ಮುನ್ನ ಅವರು ಸ್ಯಾನ್ ಫ್ರಾನ್ಸಿಸ್ಕೋದ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಭೇಟಿ ನೀಡಿ ಭಾರತದ ಪಿತಾಮಹನಿಗೆ ನಮನ ಸಲ್ಲಿಸಿದರು. ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನೆಲೆಸಿರುವ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿದರು.
Strengthening India-US ties. 🇮🇳🇺🇸
Investment & economic partnership will be in focus as India works towards its goal of being a developed nation in the next 25 years. pic.twitter.com/BhhU6ghpTe
— Piyush Goyal (@PiyushGoyal) September 6, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.