ನವದೆಹಲಿ: ಪಾಕಿಸ್ಥಾನವು ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿದೆ ಎಂಬುದು ಹಲವು ಬಾರಿ ಸಾಬೀತಾಗಿದ್ದರೂ, ಸಾಕ್ಷ್ಯಾಧಾರಗಳನ್ನು ಪಡೆದ ನಂತರವೂ ಅದನ್ನು ಆ ದೇಶ ಒಪ್ಪಿಕೊಂಡಿರಲಿಲ್ಲ. ಆದರೆ ಎರಡು ದಶಕಗಳಲ್ಲಿ ಮೊದಲ ಬಾರಿಗೆ ಪಾಕಿಸ್ತಾನವು ಸೋಮವಾರ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಭಯೋತ್ಪಾದಕನ ಮೃತ ದೇಹವನ್ನು ಸ್ವೀಕರಿಸಿದೆ.
ಸೇನಾ ಪೋಸ್ಟ್ ಮೇಲೆ ದಾಳಿ ಮಾಡಲು ಜಮ್ಮು ಮತ್ತು ಕಾಶ್ಮೀರದೊಳಗೆ ನುಸುಳಿದ್ದ ತಬಾರಕ್ ಹುಸೇನ್ ಎಂಬಾತ ಸೈನಿಕರಿಂದ ಗುಂಡೇಟು ತಾಗಿಸಿಕೊಂಡು ರಜೌರಿ ಜಿಲ್ಲೆಯ ಮಿಲಿಟರಿ ಆಸ್ಪತ್ರೆಗೆ ದಾಖಲಾಗಿದ್ದ, ಬಳಿಕ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾನೆ. ಎರಡು ದಿನಗಳ ನಂತರ ಮೃತದೇಹವನ್ನು ಪಾಕಿಸ್ಥಾನಕ್ಕೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಕೋಟ್ಲಿಯ ಸಬ್ಜ್ಕೋಟ್ ಗ್ರಾಮದ ನಿವಾಸಿ ಹುಸೇನ್ ಕಳೆದ ತಿಂಗಳು ಗಡಿಯಿಂದ ಜಮ್ಮು-ಕಾಶ್ಮೀರಕ್ಕೆ ನುಸುಳಲು ಪ್ರಯತ್ನಿಸುತ್ತಿದ್ದಾಗ ಯೋಧರು ಗುಂಡು ಹಾರಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನೂ ನೀಡಿದ್ದರು. ಈತನನ್ನು ಬದುಕಿಸಲು ಸೇನೆಯ ಸೈನಿಕರು ಸಹ ರಕ್ತದಾನ ಮಾಡಿದ್ದರು, ಆದರೆ ಅವನು ಬದುಕುಳಿಯಲಿಲ್ಲ.
ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿರುವ ಚಕನ್ ದ ಬಾಗ್ ಅಡ್ಡರಸ್ತೆಯಲ್ಲಿ ಪೊಲೀಸರು ಮತ್ತು ನಾಗರಿಕ ಅಧಿಕಾರಿಗಳ ಸಮ್ಮುಖದಲ್ಲಿ ಭಾರತೀಯ ಸೇನೆ ಹುಸೇನ್ ಮೃತದೇಹವನ್ನು ಪಾಕಿಸ್ತಾನಕ್ಕೆ ಹಸ್ತಾಂತರಿಸಿದೆ ಎಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎರಡು ದಶಕಗಳ ನಂತರ ಪಾಕಿಸ್ತಾನ ಭಯೋತ್ಪಾದಕನೊಬ್ಬನ ಶವವನ್ನು ಸ್ವೀಕರಿಸಿದೆ. ಈ ಹಿಂದೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ತನ್ನ ನಾಗರಿಕರ ಶವಗಳನ್ನು ಸ್ವೀಕರಿಸಲು ಪಾಕಿಸ್ತಾನ ನಿರಾಕರಿಸುತ್ತಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.