ನವದೆಹಲಿ: “ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದ್ದು, ಇದು ಸಾಮಾನ್ಯ ಸಾಧನೆಯಲ್ಲ. ಪ್ರತಿಯೊಬ್ಬ ಭಾರತೀಯನೂ ಇದರ ಬಗ್ಗೆ ಹೆಮ್ಮೆ ಪಡುತ್ತಾನೆ. ಈ ಉತ್ಸಾಹವನ್ನು ನಾವು ಉಳಿಸಿಕೊಳ್ಳಬೇಕು” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ
ಈ ವರ್ಷದ ಕೊನೆಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಗುಜರಾತ್ನ ಸೂರತ್ ನಗರದ ಓಲ್ಪಾಡ್ ಪ್ರದೇಶದಲ್ಲಿ ಆಯೋಜಿಸಲಾದ ಮೆಗಾ ವೈದ್ಯಕೀಯ ಶಿಬಿರದಲ್ಲಿ ಅವರು ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳನ್ನು ಮತ್ತು ಹಾಜರಿದ್ದವರನ್ನು ಉದ್ದೇಶಿಸಿ ವರ್ಚುವಲ್ ಆಗಿ ಮಾತನಾಡಿದರು.
ಕೆಲವು ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ ನಡೆಸಿದರು ಮತ್ತು ನೈಸರ್ಗಿಕ ಕೃಷಿಗೆ ಬದಲಾಗುವಂತೆ ರೈತರಿಗೆ ಮನವಿ ಮಾಡಿದರು, ಇದರಿಂದ ಕನಿಷ್ಠ ವೆಚ್ಚದಲ್ಲಿ ಉತ್ತಮ ಇಳುವರಿ ದೊರೆಯುತ್ತದೆ ಎಂದು ಹೇಳಿದರು.
ಗುಜರಾತ್ ಸರ್ಕಾರವನ್ನು ಶ್ಲಾಘಿಸಿದ ಅವರು, ಬಿಜೆಪಿ ನೇತೃತ್ವದ ರಾಜ್ಯ ಮತ್ತು ಕೇಂದ್ರವನ್ನು ”ಡಬಲ್ ಇಂಜಿನ್ ಸರಕಾರ” ಎಂದು ಉಲ್ಲೇಖಿಸಿದರು.
”ಇತ್ತೀಚೆಗೆ ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಈ ಸಾಧನೆಯು ನಮಗೆ ಈ ಅಮೃತ್ ಕಾಲದಲ್ಲಿ ಇನ್ನೂ ಹೆಚ್ಚು ಶ್ರಮಿಸುವ ಮತ್ತು ದೊಡ್ಡ ಗುರಿಗಳನ್ನು ಸಾಧಿಸುವ ಆತ್ಮವಿಶ್ವಾಸವನ್ನು ನೀಡುತ್ತದೆ. ಈ ಪ್ರಗತಿ ಸಾಮಾನ್ಯವಲ್ಲ. ಪ್ರತಿಯೊಬ್ಬ ಭಾರತೀಯನೂ ಅದರ ಬಗ್ಗೆ ಹೆಮ್ಮೆ ಪಡುತ್ತಾನೆ. ಈ ಉತ್ಸಾಹವನ್ನು ನಾವು ಉಳಿಸಿಕೊಳ್ಳಬೇಕಾಗಿದೆ” ಎಂದು ಪ್ರಧಾನಿ ಹೇಳಿದರು.
ಕೇಂದ್ರದ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಉಲ್ಲೇಖಿಸಿದ ಮೋದಿ, ”ಕಳೆದ 8 ವರ್ಷಗಳಲ್ಲಿ ಬಡವರಿಗಾಗಿ ದೇಶಾದ್ಯಂತ ಸರ್ಕಾರವು ಮೂರು ಕೋಟಿ ಮನೆಗಳನ್ನು ನಿರ್ಮಿಸಲಾಗಿದೆ. ಇವುಗಳಲ್ಲಿ ಸುಮಾರು 10 ಲಕ್ಷ ಮನೆಗಳನ್ನು ಗುಜರಾತ್ ಒಂದರಲ್ಲೇ ನಿರ್ಮಿಸಲಾಗಿದೆ” ಎಂದರು. ಗುಜರಾತ್ನ ಆರೋಗ್ಯ ಮೂಲಸೌಕರ್ಯವನ್ನು ಶ್ಲಾಘಿಸಿದ ಮೋದಿ, ರಾಜ್ಯವು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳ ದೃಢವಾದ ಜಾಲವನ್ನು ಹೊಂದಿದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.