ನವದೆಹಲಿ: ಭಾರತ-ಜಪಾನ್ 2 ಪ್ಲಸ್ 2 ಸಭೆಯ ಸಮಾರೋಪ ಸಮಾರಂಭದ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಅವರು ಇಂದು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರನ್ನು ಭೇಟಿ ಮಾಡಿದರು.
ಈ ಸಮಯದಲ್ಲಿ ಭಾರತ ಮತ್ತು ಜಪಾನ್ನ ನೀತಿಗಳು ಮತ್ತು ಹಿತಾಸಕ್ತಿಗಳ ನಿಕಟ ಸಮನ್ವಯದ ಪ್ರಾಮುಖ್ಯತೆಯನ್ನು ಡಾ ಜೈಶಂಕರ್ ಒತ್ತಿ ಹೇಳಿದರು. ಕಿಶಿದಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ವ್ಯಕ್ತಪಡಿಸಿದ ದೂರದೃಷ್ಟಿಯು ಬೇಗನೆ ಸಾಕಾರಗೊಳ್ಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ನಿಧನಕ್ಕೆರಾಜನಾಥ್ ಸಿಂಗ್ ಅವರು ತಮ್ಮ ಸಂತಾಪವನ್ನು ವ್ಯಕ್ತಪಡಿಸಿದರು. ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಖಾತ್ರಿಪಡಿಸುವಲ್ಲಿ ಭಾರತ-ಜಪಾನ್ ಸಹಭಾಗಿತ್ವವು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ ಎಂದು ಅವರು ಹೇಳಿದರು.
ಇಬ್ಬರು ನಾಯಕರು ಜಪಾನಿನಲ್ಲಿ ನಡೆದ ಭಾರತ-ಜಪಾನ್ 2 ಪ್ಲಸ್ 2 ಸಭೆಯಲ್ಲಿ ಭಾಗಿಯಾಗಿದ್ದಾರೆ. ರಾಜನಾಫ್ ಸಿಂಗ್ ಅವರು ಜಪಾನ್ ರಕ್ಷಣಾ ಸಚಿವರೊಂದಿಗೆ ಮಾತುಕತೆ ನಡೆಸಿದ್ದಾರೆ ಮತ್ತು ಜೈಶಂಕರ್ ಅಲ್ಲಿನ ವಿದೇಶಾಂಗ ಸಚಿವರೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದಾರೆ.
Pleased to call on PM Fumio Kishida at the conclusion of our 2+2 meeting. Underlined the importance of closer coordination of policies and interests of India and Japan at this time. pic.twitter.com/agnv554SmZ
— Dr. S. Jaishankar (@DrSJaishankar) September 9, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.