ಬೆಂಗಳೂರು: ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ರಾಜ್ಯವು 1.3 ಲಕ್ಷ ಕೋಟಿ ರೂಪಾಯಿ ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಿದೆ ಮತ್ತು ಶೀಘ್ರದಲ್ಲೇ ಹೈಡ್ರೋಜನ್ ಇಂಧನ ಕ್ಷೇತ್ರದಲ್ಲಿ ಕೆಲಸ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಹೇಳಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ‘ಲಘು ಉದ್ಯೋಗ ಭಾರತಿ’ ಆಯೋಜಿಸಿದ್ದ ಭಾರತೀಯ ಉತ್ಪಾದನಾ ಪ್ರದರ್ಶನ-2022ರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಮುಂಬೈ-ಚೆನ್ನೈ ಕಾರಿಡಾರ್ನ ಕರ್ನಾಟಕದ ಉದ್ದಕ್ಕೂ ಕೈಗಾರಿಕೆಗಳನ್ನು ಸ್ಥಾಪಿಸಲು ಮತ್ತು ಸಮುದ್ರ ತೀರದಲ್ಲಿ ನವೀಕರಿಸಬಹುದಾದ ಇಂಧನವನ್ನು ಸ್ಥಾಪಿಸಲು ನಮ್ಮ ಸರ್ಕಾರ ಬಯಸುತ್ತದೆ ಎಂದು ಅವರು ಹೇಳಿದ್ದಾರೆ.
”ನಾವು ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ವ್ಯಾಪಕವಾದ ಕೆಲಸವನ್ನು ಮಾಡುತ್ತಿದ್ದೇವೆ. ನಾವು ಶೀಘ್ರದಲ್ಲೇ ಹೈಡ್ರೋಜನ್ ಇಂಧನವನ್ನು ಉತ್ಪಾದಿಸಲು ಪ್ರಾರಂಭಿಸಲಿದ್ದೇವೆ. ನವೀಕರಿಸಬಹುದಾದ ಇಂಧನದಲ್ಲಿ 1.3 ಲಕ್ಷ ಕೋಟಿ ರೂಪಾಯಿ ಮೌಲ್ಯದ ಒಪ್ಪಂದಗಳಿಗೆ ಸಹಿ ಹಾಕಿದ್ದೇವೆ” ಎಂದು ಬೊಮ್ಮಾಯಿ ಹೇಳಿದ್ದಾರೆ.
”ಜೈವಿಕ ಇಂಧನ, ಸೌರ ಮತ್ತು ಹೈಡ್ರೋಜನ್ ಉತ್ಪಾದನೆಯಾಗಲಿದೆ. ನಾವು ಸಮುದ್ರದ ನೀರಿನಿಂದ ಅಮೋನಿಯಾವನ್ನು ಉತ್ಪಾದಿಸಲಿದ್ದೇವೆ. ಇದು ನಮ್ಮ ಕಾರ್ಯಸೂಚಿಯ ಅವಿಭಾಜ್ಯ ಅಂಗವಾಗಿದೆ,” ಎಂದು ಮುಖ್ಯಮಂತ್ರಿ ಹೇಳಿದರು.
“ರಾಜ್ಯವು ಕೈಗಾರಿಕೋದ್ಯಮಿಗಳ ಉದ್ಯಮಶೀಲತೆ, ಸಂಶೋಧನೆ ಮತ್ತು ಅಭಿವೃದ್ಧಿ, ಕೌಶಲ್ಯ ಮತ್ತು ಬಂಡವಾಳವನ್ನು ಗುರುತಿಸುತ್ತದೆ ಮತ್ತು ಅವರಿಗೆ ಸಾಧ್ಯವಿರುವ ರೀತಿಯಲ್ಲಿ ಸಹಾಯ ಮಾಡುತ್ತದೆ” ಎಂದಿದ್ದಾರೆ.
ಈ ನಿಟ್ಟಿನಲ್ಲಿ ರಾಜ್ಯವು ಕೈಗಾರಿಕೆಗಳಿಗೆ ಪಿಎಲ್ಐ (ಉತ್ಪಾದನೆ ಸಂಬಂಧಿತ ಪ್ರೋತ್ಸಾಹ) ನೀಡಲು ಕ್ರಮ ಕೈಗೊಂಡಿದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.