ಲಂಡನ್: ಬ್ರಿಟನ್ ರಾಣಿ ಎಲಿಜಬೆತ್ ಅವರ ಅಂತ್ಯಕ್ರಿಯೆಗೂ ಮೊದಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಬಕಿಂಗ್ಹ್ಯಾಮ್ ಅರಮನೆಯಲ್ಲಿ ನಡೆದ ಸ್ವಾಗತ ಸಮಾರಂಭದಲ್ಲಿ ಕಿಂಗ್ ಚಾರ್ಲ್ಸ್ III ಅವರನ್ನು ಭೇಟಿಯಾದರು.
ರಾಷ್ಟ್ರಪತಿ ಮುರ್ಮು ಅವರು ಲಂಡನ್ನ ಬಕಿಂಗ್ಹ್ಯಾಮ್ ಅರಮನೆ ಬಳಿಯ ಲ್ಯಾಂಕಾಸ್ಟರ್ ಹೌಸ್ನಲ್ಲಿ ರಾಣಿ ಎಲಿಜಬೆತ್ II ರ ಸಂತಾಪ ಪುಸ್ತಕಕ್ಕೆ ಸಹಿ ಹಾಕಿದರು.
“ರಾಷ್ಟ್ರಪತಿ ದ್ರೌಪದಿ ಮುರ್ಮು ಲಂಡನ್ನ ಲ್ಯಾಂಕಾಸ್ಟರ್ ಹೌಸ್ನಲ್ಲಿ ಹರ್ ಮೆಜೆಸ್ಟಿ ರಾಣಿ ಎಲಿಜಬೆತ್ II ರ ನೆನಪಿಗಾಗಿ ಸಂತಾಪ ಪುಸ್ತಕಕ್ಕೆ ಸಹಿ ಹಾಕಿದ್ದಾರೆ” ಎಂದು ರಾಷ್ಟ್ರಪತಿ ಭವನ ಟ್ವೀಟ್ ಮಾಡಿದೆ.
“ರಾಷ್ಟ್ರಪತಿ ದ್ರೌಪದಿ ಮುರ್ಮು ರಾಣಿಯ ಅಂತ್ಯಕ್ರಿಯೆಯ ಮೊದಲು ಕಿಂಗ್ ಚಾರ್ಲ್ಸ್ ಅವರನ್ನು ಭೇಟಿಯಾದರು. ಬಳಿಕ ವೆಸ್ಟ್ಮಿನಿಸ್ಟರ್ ಹಾಲ್ನಲ್ಲಿ ಇರಿಸಲಾಗಿರುವ ರಾಣಿ ಎಲಿಜಬೆತ್ II ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿದರು” ಎಂದಿದೆ.
ರಾಣಿ ಎಲಿಜಬೆತ್ II ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಮತ್ತು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸಲು ರಾಷ್ಟ್ರಪತಿ ಸೆಪ್ಟೆಂಬರ್ 17 ರಿಂದ 19 ರವರೆಗೆ ಯುನೈಟೆಡ್ ಕಿಂಗ್ಡಮ್ಗೆ ಅಧಿಕೃತ ಪ್ರವಾಸದಲ್ಲಿದ್ದಾರೆ.
Hon’ble President of India Droupadi Murmu met King Charles III at a reception held at Buckingham Palace today. @rashtrapatibhvn @DrSJaishankar @MEAIndia @VDoraiswami @MIB_India pic.twitter.com/81ZhxyDDDf
— India in the UK (@HCI_London) September 18, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.