ನವದೆಹಲಿ: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿಷಯ ಪ್ರಸ್ತಾಪಿಸಿ ಭಾರತ ವಿರೋಧಿ ಹೇಳಿಕೆ ನೀಡಿದ ಬಳಿಕ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರನ್ನು ಭಾರತೀಯ ರಾಜತಾಂತ್ರಿಕ ಮಿಜಿತೊ ವಿನಿಟೊ ಕಟುವಾಗಿ ಟೀಕಿಸಿದ್ದಾರೆ.
ವಿಶ್ವಸಂಸ್ಥೆಯ ಭಾರತೀಯ ಮಿಷನ್ನ ಮೊದಲ ಕಾರ್ಯದರ್ಶಿ ಮಿಜಿಟೊ ವಿನಿಟೊ ಅವರು ಉತ್ತರಿಸುವ ಹಕ್ಕು ಬಳಸಿಕೊಂಡು, “ಭಾರತದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲು ಪಾಕಿಸ್ತಾನದ ಪ್ರಧಾನಿ ಈ ಮಹಾಸಭೆಯ ವೇದಿಕೆಯನ್ನು ಆಯ್ಕೆ ಮಾಡಿಕೊಂಡಿರುವುದು ವಿಷಾದನೀಯ. ತನ್ನ ದೇಶದಲ್ಲಿನ ದುಷ್ಕೃತ್ಯಗಳನ್ನು ಮರೆಮಚಲು ಮತ್ತು ಜಗತ್ತಿನ ಮುಂದೆ ತಮ್ಮ ಭಾರತ ವಿರೋಧಿ ಕೃತ್ಯಗಳನ್ನು ಸಮರ್ಥಿಸಲು ಅವರು ಹೀಗೆ ಮಾಡಿದ್ದಾರೆ” ಎಂದಿದ್ದಾರೆ.
ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಅವರು ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ 10 ಕ್ಕೂ ಹೆಚ್ಚು ಬಾರಿ ಕಾಶ್ಮೀರವನ್ನು ಮತ್ತು 9 ಕ್ಕೂ ಹೆಚ್ಚು ಬಾರಿ ಭಾರತವನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದರು. ಈ ಹಿಂದೆಯೂ ಪಾಕಿಸ್ತಾನದ ಪ್ರಧಾನ ಮಂತ್ರಿಗಳು ಕಾಶ್ಮೀರ ವಿಯಷವನ್ನು ಪ್ರಸ್ತಾಪಿಸಲು ವಿಶ್ವಸಂಸ್ಥೆಯ ವೇದಿಕೆಯನ್ನು ಬಳಸಿಕೊಂಡಿದ್ದಾರೆ.
ಭಯೋತ್ಪಾದನೆಗೆ ಪಾಕಿಸ್ತಾನದ ಬೆಂಬಲದ ವಿಷಯವನ್ನು ಪ್ರಸ್ತಾಪಿಸಿದ ಭಾರತೀಯ ರಾಜತಾಂತ್ರಿಕ ಮಿಜಿಟೊ, “ತನ್ನ ನೆರೆಹೊರೆಯವರೊಂದಿಗೆ ಶಾಂತಿಯನ್ನು ಬಯಸುತ್ತದೆ ಎಂದು ಹೇಳಿಕೊಳ್ಳುವ ಪಾಕಿಸ್ಥಾನ ರಾಜಕೀಯವು ಎಂದಿಗೂ ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರಾಯೋಜಿಸುವುದನ್ನು ನಿಲ್ಲಿಸಿಲ್ಲ” ಎಂದು ಹೇಳಿದರು.
“ಇಸ್ಲಾಮಾಬಾದ್ ಭೀಕರ ಮುಂಬೈ ಭಯೋತ್ಪಾದಕ ದಾಳಿಯ ಯೋಜಕರಿಗೆ ಆಶ್ರಯ ನೀಡುತ್ತಿದೆ, ಅಂತರರಾಷ್ಟ್ರೀಯ ಸಮುದಾಯದ ಒತ್ತಡದ ಬಂದಾಗ ಮಾತ್ರ ಅದು ಉಗ್ರರ ವಿರುದ್ಧ ಕ್ರಮ ತೆಗೆದುಕೊಂಡ ನಾಟಕವಾಡುತ್ತದೆ” ಎಂದಿದ್ದಾರೆ.
ಪಾಕಿಸ್ತಾನದ ವಿಷಯಕ್ಕೆ ಬಂದಾಗ ಭಯೋತ್ಪಾದನೆಯು ಭಾರತಕ್ಕೆ ಪ್ರಮುಖ ಕಾಳಜಿಯಾಗಿ ಉಳಿದಿದೆ ಮತ್ತು ಇಸ್ಲಾಮಾಬಾದ್ ಭಯೋತ್ಪಾದನೆಯ ವಿರುದ್ಧ ಕ್ರಮ ಕೈಗೊಳ್ಳದ ಹೊರತು ಯಾವುದೇ ಮಾತುಕತೆ ನಡೆಯುವುದಿಲ್ಲ ಎಂಬುದು ಭಾರತದ ದೃಢ ನಿಲುವು ಎಂದಿದ್ದಾರೆ.
ಹಿಂದೂಗಳು, ಕ್ರಿಶ್ಚಿಯನ್ನರು, ಸಿಖ್ಖರು ಮತ್ತು ಅಹ್ಮದೀಯರು ಪಾಕಿಸ್ಥಾನದಲ್ಲಿ ಕಾನೂನು ಕ್ರಮ ಮತ್ತು ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.