ನವದೆಹಲಿ: ಹಿರಿಯ ವಕೀಲ ಆರ್ ವೆಂಕಟರಮಣಿ ಅವರನ್ನು ಭಾರತದ ಹೊಸ ಅಟಾರ್ನಿ ಜನರಲ್ ಆಗಿ ನೇಮಿಸಲಾಗಿದೆ.
“ಹಿರಿಯ ವಕೀಲ ಆರ್ ವೆಂಕಟರಮಣಿ ಅವರು ಭಾರತದ ಹೊಸ ಅಟಾರ್ನಿ ಜನರಲ್ ಆಗಿ ನೇಮಕಗೊಂಡಿದ್ದಾರೆ. ಮೂರು ವರ್ಷಗಳ ಅವಧಿಗೆ ಹೊಸ ಅಟಾರ್ನಿ ಜನರಲ್ ಆಗಿ ವೆಂಕಟರಮಣಿ ಅವರನ್ನು ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ” ಎಂದು ಕಾನೂನು ಮತ್ತು ನ್ಯಾಯ ಸಚಿವಾಲಯ ಅಧಿಸೂಚನೆಯಲ್ಲಿ ತಿಳಿಸಿದೆ.
ಭಾರತಕ್ಕೆ ಹೊಸದಾಗಿ ನೇಮಕಗೊಂಡ ಅಟಾರ್ನಿ ಜನರಲ್ ವೆಂಕಟರಮಣಿ ಅವರು ಈ ಸೂಕ್ಷ್ಮ ಕಾರ್ಯವನ್ನು ನಿರ್ವಹಿಸಲು ತಮ್ಮ ಮೇಲೆ ವಿಶ್ವಾಸವಿಟ್ಟಿದ್ದಕ್ಕಾಗಿ ಪ್ರಧಾನ ಮಂತ್ರಿ, ಗೃಹ ಸಚಿವರು ಮತ್ತು ಕಾನೂನು ಸಚಿವರಿಗೆ ಧನ್ಯವಾದಗಳನ್ನು ಅರ್ಪಿಸಿದರು.
ಸಂವಿಧಾನದ ಪರಿಚ್ಛೇದ 76 (1) ಅಡಿ ಕೇಂದ್ರ ಸರ್ಕಾರದ ಸಂಪುಟದ ನಿರ್ಧಾರದಂತೆ ರಾಷ್ಟ್ರಪತಿಗಳಿಗೆ ಭಾರತದ ಅಟಾರ್ನಿ ಜನರಲ್ ಅವರನ್ನು ನೇಮಿಸುವ ಅಧಿಕಾರ ಇರುತ್ತದೆ. ಮುಕುಲ್ ರೋಹಟಗಿ ಅವರು ಕೇಂದ್ರದ ಪ್ರಸ್ತಾಪವನ್ನು ತಿರಸ್ಕರಿಸಿದ ಬೆನ್ನಲ್ಲೇ ಆರ್ ವೆಂಕಟರಮಣಿ ಅವರಿಗೆ ಈ ಸ್ಥಾನ ಒಲಿದು ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.