ಸೂರತ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನಗಳ ಗುಜರಾತ್ ಭೇಟಿ ಹಮ್ಮಿಕೊಂಡಿದ್ದಾರೆ. ಇಂದು ಅವರು ಸೂರತ್ನಲ್ಲಿ 3,400 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಮಾಡಿದರು. ಇವುಗಳಲ್ಲಿ ನೀರು ಸರಬರಾಜು ಮತ್ತು ಒಳಚರಂಡಿ ಯೋಜನೆಗಳು, ಡ್ರೀಮ್ ಸಿಟಿ, ಜೀವವೈವಿಧ್ಯ ಉದ್ಯಾನವನ ಮತ್ತು ಇತರ ಅಭಿವೃದ್ಧಿ ಯೋಜನೆಗಳಾದ ಸಾರ್ವಜನಿಕ ಮೂಲಸೌಕರ್ಯ, ಪಾರಂಪರಿಕ ಮರುಸ್ಥಾಪನೆ, ಸಿಟಿ ಬಸ್/ಬಿಆರ್ಟಿಎಸ್ ಮೂಲಸೌಕರ್ಯ ಮತ್ತು ಎಲೆಕ್ಟ್ರಿಕ್ ವಾಹನ ಮೂಲಸೌಕರ್ಯ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಯೋಜನೆಗಳು ಸೇರಿವೆ.
ಸೂರತ್ನಲ್ಲಿ ವೇಗವಾಗಿ ಬೆಳೆಯುತ್ತಿರುವ ಡೈಮಂಡ್ ಟ್ರೇಡಿಂಗ್ ವಲಯಕ್ಕೆ ವಾಣಿಜ್ಯ ಮತ್ತು ವಸತಿ ಸ್ಥಳಕ್ಕಾಗಿ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುವ ದೃಷ್ಟಿಯೊಂದಿಗೆ ಡ್ರೀಮ್ ಸಿಟಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಪ್ರಧಾನಮಂತ್ರಿಯವರು ಇದರ ಎರಡನೇ ಹಂತದ ಯೋಜನೆಗೆ ಶಂಕುಸ್ಥಾಪನೆ ಮಾಡಿದರು.
ಸೂರತ್ನ ವಿಜ್ಞಾನ ಕೇಂದ್ರದಲ್ಲಿ ಖೋಜ್ ಮ್ಯೂಸಿಯಂ ಉದ್ಘಾಟನೆ ಮಾಡುವುದರ ಜೊತೆಗೆ 87 ಹೆಕ್ಟೇರ್ನಲ್ಲಿ ನಿರ್ಮಿಸಲಾಗುತ್ತಿರುವ ಜೀವವೈವಿಧ್ಯ ಉದ್ಯಾನವನದ ಶಂಕುಸ್ಥಾಪನೆಯನ್ನು ಪ್ರಧಾನಿ ಮೋದಿ ನೆರವೇರಿಸಿದರು. ಮಕ್ಕಳಿಗಾಗಿ ನಿರ್ಮಿಸಲಾದ ಈ ವಸ್ತುಸಂಗ್ರಹಾಲಯವು ಸಂವಾದಾತ್ಮಕ ಪ್ರದರ್ಶನಗಳು, ವಿಚಾರಣೆ-ಆಧಾರಿತ ಚಟುವಟಿಕೆಗಳು ಮತ್ತು ಜಿಜ್ಞಾಸೆ ಆಧಾರಿತ ಪರಿಶೋಧನೆಗಳನ್ನು ಹೊಂದಿರುತ್ತದೆ.
ಇಂದು ಮುಂಜಾನೆ ಪ್ರಧಾನಿ ರೋಡ್ ಶೋ ನಡೆಸಿದ್ದು, ಅವರನ್ನು ಸ್ವಾಗತಿಸಲು ಅಪಾರ ಜನಸ್ತೋಮ ನೆರೆದಿತ್ತು.
ಭಾವನಗರದಲ್ಲಿ 20 ಎಕರೆ ಪ್ರದೇಶದಲ್ಲಿ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಕೇಂದ್ರವು ಸಾಗರ ಜಲವಾಸಿ ಗ್ಯಾಲರಿ, ಆಟೋಮೊಬೈಲ್ ಗ್ಯಾಲರಿ ಮತ್ತು ನೊಬೆಲ್ ಪ್ರಶಸ್ತಿ ಗ್ಯಾಲರಿ ಸೇರಿದಂತೆ ಹಲವಾರು ಥೀಮ್ ಆಧಾರಿತ ಗ್ಯಾಲರಿಗಳನ್ನು ಹೊಂದಿದೆ. ಕೇಂದ್ರವು ಮಕ್ಕಳಿಗೆ ಸೃಜನಶೀಲ ವೇದಿಕೆಯನ್ನು ಒದಗಿಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.