ಬೆಂಗಳೂರು: ಕರ್ನಾಟಕ ರಾಜ್ಯವು ಕೃಷಿ ಕ್ಷೇತ್ರದ ಡಿಜಿಟಲೀಕರಣದಲ್ಲಿ ಮುಂಚೂಣಿಯಲ್ಲಿದ್ದು, ರೈತರ ಸರ್ವೆ ಸಂಖ್ಯೆ ಮತ್ತು ಆಧಾರ್ ವಿವರಗಳನ್ನು ಲಿಂಕ್ ಮಾಡುವ ಮೂಲಕ 78 ಲಕ್ಷ ರೈತರ ದಾಖಲೆಗಳನ್ನು ಡಿಜಿಟಲ್ ವ್ಯಾಪ್ತಿಗೆ ತರಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನೈಸರ್ಗಿಕ ಕೃಷಿ ಮತ್ತು ಕೃಷಿ ದಾಖಲೆಗಳ ಡಿಜಿಟಲೀಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಿದ ಅವರು, ಕೃಷಿ ಕ್ಷೇತ್ರದ ಡಿಜಿಟಲೀಕರಣದಲ್ಲಿ ರಾಜ್ಯ ಮುಂದಿದ್ದು, 62 ಲಕ್ಷ ಭೂಮಾಲೀಕರು ಮತ್ತು 16 ಲಕ್ಷ ಭೂರಹಿತ ರೈತರ ದಾಖಲೆಗಳನ್ನು ಭೂಮಿ ಸಾಫ್ಟ್ವೇರ್ ಅಡಿ ಡಿಜಿಟಲೀಕರಣಗೊಳಿಸಲಾಗಿದೆ ಎಂದಿದ್ದಾರೆ.
‘ಫ್ರುಟ್ಸ್’ ಸಾಫ್ಟ್ವೇರ್ ಅನ್ನು ಈಗ ಇತರ ರಾಜ್ಯಗಳು ಅನುಕರಿಸುತ್ತಿವೆ. ಈ ಸಾಫ್ಟ್ವೇರ್ ಅನ್ನು ನಿಯಮಿತವಾಗಿ ಸುಧಾರಿಸಲಾಗುತ್ತಿದೆ. ರಾಜ್ಯವು ಕೇಂದ್ರದ ‘ಸ್ವಾಮಿತ್ವ’ ಯೋಜನೆಯನ್ನು ಪ್ರಚಾರ ಕ್ರಮದಲ್ಲಿ ಜಾರಿಗೊಳಿಸುತ್ತಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ನ್ಯಾನೋ ಯೂರಿಯಾ ಕುರಿತು ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮೊದಲ ನ್ಯಾನೋ ಯೂರಿಯಾ ಘಟಕವನ್ನು ಸ್ಥಾಪಿಸಲಾಗುತ್ತಿದೆ ಎಂದು ಹೇಳಿದರು. ಇದನ್ನು ವಿವರವಾದ ಅಧ್ಯಯನದ ನಂತರ ರೈತರಿಗೆ ಪರಿಚಯಿಸಲಾಯಿತು ಎಂದಿದ್ದಾರೆ.
ಡಿಜಿಟಲ್ ತಂತ್ರಜ್ಞಾನದ ಮೂಲಕ ರೈತರೇ ತಮ್ಮ ಜಮೀನು ಸಮೀಕ್ಷೆ ನಡೆಸುತ್ತಿದ್ದು, ಇದುವರೆಗೆ 212 ಕೋಟಿ ನಿವೇಶನಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ತೊಡಕುಗಳನ್ನು ತಪ್ಪಿಸಲು ಎಲ್ಲ ರೈತರು ತಾವೇ ಸರ್ವೆ ಮಾಡಲು ಕ್ರಮಕೈಗೊಳ್ಳಲಾಗಿದ್ದು, ಇಲ್ಲಿಯವರೆಗೂ ಅತ್ಯಂತ ಪ್ರಾಮಾಣಿಕವಾಗಿ ಸಮೀಕ್ಷೆ ನಡೆಸಿದ್ದೇವೆ ಎಂದರು.
ರೈತರ ಆದಾಯವನ್ನು ದ್ವಿಗುಣಗೊಳಿಸುವ ಪ್ರಧಾನಿ ನರೇಂದ್ರ ಮೋದಿಯವರ ಆಶಯಗಳನ್ನು ಈಡೇರಿಸಲು ಕರ್ನಾಟಕ, ಮಹಾರಾಷ್ಟ್ರ ಮತ್ತು ಗುಜರಾತ್ ನೈಸರ್ಗಿಕ ಕೃಷಿಯನ್ನು ಸಕ್ರಿಯವಾಗಿ ತೆಗೆದುಕೊಂಡಿವೆ ಎಂದು ಹೇಳಿದರು. ರಾಜ್ಯವು ಐದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳನ್ನು ಹೊಂದಿದ್ದು, ವಿಶ್ವವಿದ್ಯಾನಿಲಯಗಳ ನಿರಂತರ ಮೇಲ್ವಿಚಾರಣೆಯಲ್ಲಿ 1,000 ಎಕರೆಗಳಲ್ಲಿ ನೈಸರ್ಗಿಕ ಕೃಷಿಯನ್ನು ಮಾಡಲಾಗುತ್ತಿದೆ ಎಂದಿದ್ದಾರೆ.
ಸಾವಯವ ಕೃಷಿಯಿಂದ 2.4 ಲಕ್ಷ ಹೆಕ್ಟೇರ್ ಭೂಮಿಯನ್ನು ನೈಸರ್ಗಿಕ ಕೃಷಿಯಾಗಿ ಪರಿವರ್ತಿಸಲಾಗುತ್ತಿದೆ ಮತ್ತು ಮಾರ್ಚ್ 2023 ರ ವೇಳೆಗೆ ಹೆಚ್ಚುವರಿಯಾಗಿ ಒಂದು ಲಕ್ಷ ಹೆಕ್ಟೇರ್ ನೈಸರ್ಗಿಕ ಕೃಷಿಯಾಗಿ ಪರಿವರ್ತಿಸಲಾಗುವುದು. ಒಟ್ಟು 41,434 ರೈತರನ್ನು ನೈಸರ್ಗಿಕ ಕೃಷಿಗೆ ಆಯ್ಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.