News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಾಲ್ಘರ್‌ ಸಾಧುಗಳ ಹತ್ಯೆ ಪ್ರಕರಣ: ಸಿಬಿಐಗೆ ನೀಡಲು ಮಹಾ ಸರ್ಕಾರ ಒಪ್ಪಿಗೆ

ನವದೆಹಲಿ: ಮಹಾರಾಷ್ಟ್ರ ಸರ್ಕಾರವು 2020 ರಲ್ಲಿ ಪಾಲ್ಘರ್‌ನಲ್ಲಿ ನಡೆದ ಸಾಧುಗಳ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲು ಒಪ್ಪಿಗೆ ನೀಡಿದೆ. ಅಫಿಡವಿಟ್‌ನಲ್ಲಿ ಸರ್ಕಾರವು ತನಿಖೆಯನ್ನು ಸಿಬಿಐಗೆ ಒಪ್ಪಿಸಲು ಸಿದ್ಧ ಮತ್ತು  ಅದಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದು ಹೇಳಿದೆ.

ಏಪ್ರಿಲ್ 16, 2020 ರಂದು, ಗುಂಪೊಂದು ಇಬ್ಬರು ಸಾಧುಗಳಾದ ಚಿಕ್ನೆ ಮಹಾರಾಜ್ ಕಲ್ಪವೃಕ್ಷಗಿರಿ, ಮತ್ತು ಸುಶೀಲಗಿರಿ ಮಹಾರಾಜ್ ಮತ್ತು ಅವರ ಕಾರಿನ ಚಾಲಕ ನಿಲೇಶ್ ತೆಲ್ಗಡೆ ಅವರನ್ನು ಮುಂಬೈನಿಂದ 140 ಕಿಮೀ ದೂರದ ಉತ್ತರಕ್ಕೆ ಇರುವ. ಪಾಲ್ಘರ್ ಜಿಲ್ಲೆಯ ಗಡ್ಚಿಂಚಲೆಯಲ್ಲಿ ಕೊಂದು ಹಾಕಿತು.

 ಲಾಕ್‌ಡೌನ್ ಸಮಯದಲ್ಲಿ ಮಕ್ಕಳನ್ನು ಕಳ್ಳತನ ಮಾಡುವವರು ಈ ಪ್ರದೇಶದಲ್ಲಿದ್ದಾರೆ ಎಂಬ ವದಂತಿಯ ನಡುವೆ ಈ ದಾಳಿ ನಡೆದಿತ್ತು.

ಕಳಸ ಪೊಲೀಸ್ ಠಾಣೆಗೆ ದೂರವಾಣಿ ಕರೆಗಳು ಬಂದ ನಂತರ ನಾಲ್ವರು ಪೊಲೀಸರ ತಂಡ ಸ್ಥಳಕ್ಕೆ ತಲುಪಿತ್ತು. ಆದರೂ ಪೊಲೀಸರು ಗುಂಪು ನಡೆಸುತ್ತಿದ್ದ ಹತ್ಯೆಯನ್ನು ತಡೆಯುವಲ್ಲಿ ವಿಫಲವಾಗಿತ್ತು.

ಈ ವಿಷಯದಲ್ಲಿ ಇಲಾಖಾ ವಿಚಾರಣೆಯನ್ನು ಪ್ರಾರಂಭಿಸಿದ ನಂತರ 18 ಪೊಲೀಸ್ ಅಧಿಕಾರಿಗಳಿಗೆ ಶಿಕ್ಷೆ ವಿಧಿಸಲಾಯಿತು. ಒಬ್ಬ ಸಹಾಯಕ ಪೊಲೀಸ್ ನಿರೀಕ್ಷಕನನ್ನು ವಜಾಗೊಳಿಸಲಾಗಿದ್ದು, ಮತ್ತೊಬ್ಬ ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮತ್ತು ಚಾಲಕನನ್ನು ಕಡ್ಡಾಯವಾಗಿ ನಿವೃತ್ತಿಗೊಳಿಸಲಾಗಿದೆ.

ಕಳೆದ ವರ್ಷ ಜನವರಿಯಲ್ಲಿ ಥಾಣೆ ಸೆಷನ್ಸ್ ನ್ಯಾಯಾಲಯವು ಈ ಪ್ರಕರಣದಲ್ಲಿ 89 ಆರೋಪಿಗಳಿಗೆ ಜಾಮೀನು ನೀಡಿತ್ತು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top