News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೀನು ಉತ್ಪಾದನೆಯಲ್ಲಿ ವಿಶ್ವದಲ್ಲೇ 3ನೇ ಸ್ಥಾನದಲ್ಲಿದೆ ಭಾರತ

ನವದೆಹಲಿ:  ಕಳೆದ ಎಂಟು ವರ್ಷಗಳಲ್ಲಿ ಮೀನು ಉತ್ಪಾದನೆ, ರಫ್ತು ಮತ್ತು ಮೂಲಸೌಕರ್ಯ ಅಭಿವೃದ್ಧಿಯನ್ನು ಸುಧಾರಿಸಲು ಸರ್ಕಾರು ಹಲವಾರು ಕ್ರಮಗಳನ್ನು ಕೈಗೊಂಡಿದೆ. ಪ್ರಸ್ತುತ ಭಾರತ ಮೀನು ಉತ್ಪಾದನೆಯಲ್ಲಿ ವಿಶ್ವದಲ್ಲೇ 3ನೇ ಸ್ಥಾನದಲ್ಲಿದೆ ಎಂದು ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಖಾತೆ ರಾಜ್ಯ ಸಚಿವ ಡಾ.ಎಲ್.ಮುರುಗನ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಒಳನಾಡು ಮೀನುಗಾರಿಕಾ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಮೀನು ಉತ್ಪಾದನೆಯಲ್ಲಿ ಭಾರತ ವಿಶ್ವದಲ್ಲಿ ಮೂರನೇ ಸ್ಥಾನದಲ್ಲಿದೆ ಎಂದಿದ್ದಾರೆ.

ಕರ್ನಾಟಕವನ್ನು ನಿರ್ದಿಷ್ಟವಾಗಿ ಉಲ್ಲೇಖಿಸಿದ ಕೇಂದ್ರ ಸಚಿವರು, 2020-21 ರಿಂದ ಇಲ್ಲಿಯವರೆಗೆ ಮೂಲಸೌಕರ್ಯ ಸೌಲಭ್ಯಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ (ಪಿಎಂಎಂಎಸ್‌ವೈ) ಪ್ರಮುಖ ಯೋಜನೆಯಡಿ ರಾಜ್ಯಕ್ಕೆ 734.77 ಕೋಟಿ ರೂಪಾಯಿಗಳನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದರು.

ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಅಡಿಯಲ್ಲಿ, ಮಂಗಳೂರು ಮೀನುಗಾರಿಕಾ ಬಂದರಿನ ಮೂರನೇ ಹಂತದ ವಿಸ್ತರಣೆ, ಗಂಗೊಳ್ಳಿ ಮೀನುಗಾರಿಕಾ ಬಂದರಿನ ಎರಡನೇ ಹಂತ, ಅಳ್ವೆಕೋಡಿ ಮತ್ತು ತೆಂಗಿನಗುಂಡಿ ಫಿಶ್ ಲ್ಯಾಂಡಿಂಗ್ ಕೇಂದ್ರಗಳನ್ನು ಪೂರ್ಣಗೊಳಿಸಲು 53 ಕೋಟಿ ರೂಪಾಯಿಗಳನ್ನು ನೀಡಲಾಗಿದೆ ಎಂದಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಮಾಜಾಳಿಯಲ್ಲಿ 250 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಮೀನುಗಾರಿಕೆ ಬಂದರಿನ ಅಭಿವೃದ್ಧಿಗೆ ತಾತ್ವಿಕವಾಗಿ ಅನುಮೋದನೆ ನೀಡಲಾಗಿದೆ. ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಅಡಿಯಲ್ಲಿ, ರಾಜ್ಯದ ಸಾಂಪ್ರದಾಯಿಕ ಮೀನುಗಾರರಿಗೆ ಒಟ್ಟು 136 ಕೋಟಿ ರೂಪಾಯಿ ವೆಚ್ಚದಲ್ಲಿ 114 ಹೊಸ ಆಳ ಸಮುದ್ರ ಮೀನುಗಾರಿಕೆ ಹಡಗುಗಳನ್ನು ಸ್ವಾಧೀನಪಡಿಸಿಕೊಳ್ಳಲು ಅನುಮೋದನೆ ನೀಡಲಾಗಿದೆ. ಒಟ್ಟು 11.31 ಕೋಟಿ ರೂಪಾಯಿ ವೆಚ್ಚದಲ್ಲಿ ಸಾಂಪ್ರದಾಯಿಕ ಮತ್ತು ಯಾಂತ್ರಿಕೃತ ಮೀನುಗಾರಿಕಾ ಹಡಗುಗಳಿಗೆ ಒಟ್ಟು 1000 ಸಂವಹನ ಮತ್ತು ಟ್ರ್ಯಾಕಿಂಗ್ ಸಾಧನಗಳು ಮತ್ತು 781 ಸುರಕ್ಷತಾ ಕಿಟ್‌ಗಳನ್ನು ವಿತರಿಸಲಾಯಿತು. ಯೋಜನೆ ಅಡಿಯಲ್ಲಿ, 62 ಹೊಸ ಐಸ್ ಪ್ಲಾಂಟ್‌ಗಳು ಅಥವಾ ಕೋಲ್ಡ್ ಸ್ಟೋರೇಜ್ ಸೌಲಭ್ಯಗಳು, 799 ಮೀನು ಸಾಗಣೆ ವಾಹನಗಳು, ಒಂದು ಮೀನು ಚಿಲ್ಲರೆ ಮಾರುಕಟ್ಟೆ, 84 ಮೀನು ಗೂಡಂಗಡಿಗಳು ಮತ್ತು ಮೂರು ಮೌಲ್ಯವರ್ಧಿತ ಉದ್ಯಮಗಳನ್ನು 133.15 ಕೋಟಿ ರೂಪಾಯಿಗಳ ಹೂಡಿಕೆಯೊಂದಿಗೆ ಬೆಂಬಲಿಸಲಾಗಿದೆ ಎಂದರು.

ಕರ್ನಾಟಕದಲ್ಲಿ ಮೀನು ಉತ್ಪಾದನೆಯು 2019-20 ರಲ್ಲಿ 6.80 ಲಕ್ಷ ಟನ್‌ಗಳಿಂದ 2021-22 ರಲ್ಲಿ 10.74 ಲಕ್ಷ ಟನ್‌ಗಳಿಗೆ ಏರಿಕೆಯಾಗಿದೆ, ಇದು ಸುಮಾರು 76 ಶೇಕಡಾ ಬೆಳವಣಿಗೆಯಾಗಿದೆ ಎಂದು ಸಚಿವರು ತಿಳಿಸಿದರು. ಪಿಎಂಎಂಎಸ್‌ವೈ ರಾಜ್ಯದಲ್ಲಿ ಈ ವಲಯದಲ್ಲಿ 1.4 ಲಕ್ಷ ನೇರ ಮತ್ತು ಪರೋಕ್ಷ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸಹಾಯ ಮಾಡಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top