ಶಿಮ್ಲಾ: ಮುಂಬರುವ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗೆ ಬಿಜೆಪಿಯು ಶಿಮ್ಲಾ ನಗರ ಕ್ಷೇತ್ರದಿಂದ ಚಹಾ ಮಾರಾಟಗಾರನನ್ನು ಕಣಕ್ಕಿಳಿಸಿದೆ.
ಶಿಮ್ಲಾದಲ್ಲಿ ಟೀ ಅಂಗಡಿ ನಡೆಸುತ್ತಿರುವ ಸಂಜಯ್ ಸೂದ್ ಅವರು ಹಿಮಾಚಲ ಪ್ರದೇಶ ಚುನಾವಣೆಗೆ ಶಿಮ್ಲಾ ನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಅವರು ನಾಲ್ಕು ಬಾರಿ ಶಿಮ್ಲಾ ನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಸಚಿವ ಸುರೇಶ್ ಭಾರದ್ವಾಜ್ ಅವರ ಬದಲಿಗೆ ಇವರಿಗೆ ಟಿಕೆಟ್ ನೀಡಲಾಗಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಸೂದ್, “ನನ್ನಂತಹ ಸಣ್ಣ ಕಾರ್ಯಕರ್ತನನ್ನು ಶಿಮ್ಲಾ ನಗರದಿಂದ ಕಣಕ್ಕಿಳಿಸಿರುವ ನನ್ನ ಪಕ್ಷಕ್ಕೆ ನಾನು ಆಭಾರಿಯಾಗಿದ್ದೇನೆ. ಬಿಜೆಪಿಗಾಗಿ ಕೆಲಸ ಮಾಡುವುದು ಉತ್ತಮ ನಿರ್ಧಾರ ಎಂದು ನಾನು ಹೇಳುತ್ತೇನೆ” ಎಂದು ಹೇಳಿದ್ದಾರೆ.
ಸೂದ್ ಪ್ರಸ್ತುತ ಬಿಜೆಪಿಯ ಶಿಮ್ಲಾ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತು ಎರಡು ಬಾರಿ ಶಿಮ್ಲಾ ಮುನ್ಸಿಪಲ್ ಕಾರ್ಪೊರೇಶನ್ನ ಕೌನ್ಸಿಲರ್ ಆಗಿ ಆಯ್ಕೆಯಾಗಿದ್ದಾರೆ. ಆರ್ಎಸ್ಎಸ್ನೊಂದಿಗಿನ ಅವರ ಸಂಬಂಧವು 1970 ರ ದಶಕದ ಹಿಂದಿನದು ಎನ್ನಲಾಗಿದೆ.
Sanjay Sood, who runs a tea shop in Shimla, filed his nomination as a BJP candidate from Shimla Urban seat in the Himachal Pradesh elections
Sood replaces BJP minister Suresh Bhardwaj, who has contested from the Shimla Urban seat four times. pic.twitter.com/Hf9aDe0xg4
— ANI (@ANI) October 21, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.