ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಂಗಳೂರು ಅರಮನೆ ಆವರಣದಲ್ಲಿ ಪ್ರಯೋಜಿಸಲಾಗಿರುವ ‘ಇನ್ವೆಸ್ಟ್ ಕರ್ನಾಟಕ’ ಜಾಗತಿಕ ಹೂಡಿಕೆದಾರರ ಸಮ್ಮೇಳನವನ್ನು ವರ್ಚುವಲ್ ಆಗಿ ಉದ್ಘಾಟಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಹೂಡಿಕೆದಾರರಿಗೆ ಕೆಂಪು ಹಾಸಿನ ಸ್ವಾಗತವನ್ನು ಆಡಳಿತ ವ್ಯವಸ್ಥೆ ನೀಡಬೇಕು” ಎಂದಿದ್ದಾರೆ.
“ಕೋವಿಡ್ ಸಂಕಷ್ಟದ ಬಳಿಕವೂ ದೇಶ ಪ್ರಗತಿಯತ್ತ ಸಾಗಿದೆ. ಸವಾಲುಗಳನ್ನು ಮೆಟ್ಟಿನಿಂತು ಇನ್ನಷ್ಟು ಪ್ರಗತಿಯತ್ತ ನಾವು ಸಾಗಬೇಕಿದೆ. ರಾಜ್ಯಗಳು ಪ್ರಗತಿ ಸಾಧಿಸಿದರೆ ದೇಶವು ಅಭಿವೃದ್ಧಿ ಹೊಂದುತ್ತದೆ. ಈ ನಿಟ್ಟಿನಲ್ಲಿ ಜಾಗತಿಕ ಹೂಡಿಕೆದಾರರ ಸಮ್ಮೇಳನವು ಹೆಚ್ಚು ಅನುಕೂಲಕಾರಿ” ಎಂದಿದ್ದಾರೆ.
ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ಸಲುವಾಗಿ ನಮ್ಮ ಸರ್ಕಾರವು ಹೂಡಿಕೆ ಸ್ನೇಹ ವಾತಾವರಣವನ್ನು ಸೃಷ್ಟಿಸಿದೆ. ಇದಕ್ಕಾಗಿ ನಮ್ಮ ಸರ್ಕಾರ 1500 ಹಳೆಯ ಮತ್ತು ಅನಗತ್ಯ ಕಾನೂನುಗಳನ್ನು ರದ್ದುಗೊಳಿಸಿದೆ. ದೇಶವು ಈಗ ಡಿಜಿಟಲ್ ಕ್ರಾಂತಿಯ ಹಾದಿಯಲ್ಲಿದೆ. ಅದಕ್ಕೆ ಪೂರಕವಾಗಿ ನಾವೆಲ್ಲರೂ ಕೆಲಸ ಮಾಡುವಾಗ ಅಗತ್ಯವಿದೆ ಎಂದು ಪ್ರಧಾನಿ ಒತ್ತಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.