ಬಾಲಿ: ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗಿಯಾಗಿದ್ದಾರೆ.
ಈ ವೇಳೆ ಜಿ20 ಸದಸ್ಯ ರಾಷ್ಟ್ರಗಳನ್ನು ಉದ್ದೇಶಿಸಿ ಮಾತನಾಡಿದ ಮೋದಿ, “ರಷ್ಯಾ ಹಾಗೂ ಉಕ್ರೇನ್ ನಡುವೆ ಕದನ ವಿರಾಮ ಘೋಷಿಸುವಂತೆ ಮಾಡಬೇಕಿದೆ. ಅದಕ್ಕಾಗಿ ರಾಜತಾಂತ್ರಿಕ ಮಾರ್ಗದ ಮೂಲಕ ದಾರಿ ಕಂಡುಕೊಳ್ಳಬೇಕಿದೆ” ಎಂದರು.
“ನಾವು ಒಗ್ಗಟ್ಟಾಗಿ ಉಕ್ರೇನ್ನಲ್ಲಿ ಕದನ ವಿರಾಮ ಜಾರಿಗೆ ಬರುವಂತೆ ಮಾಡಬೇಕಿದೆ. ನಾನಿದನ್ನು ಹಲವು ಬಾರಿ ಹೇಳಿದ್ದೇನೆ, ಇದೀಗ ಪುನರುಚ್ಚರಿಸುತ್ತಿದ್ದೇನೆ” ಎಂದು ಕರೆ ನೀಡಿದ್ದಾರೆ.
ಜಗತ್ತು ಕೋವಿಡ್ ಸಾಂಕ್ರಾಮಿಕದ ನಂತರದ ಹಂತಕ್ಕೆ ಬಂದಿದೆ. ನಾವೀಗ ವಿಶ್ವದಲ್ಲಿ ಶಾಂತಿ, ಸಾಮರಸ್ಯ ನೆಲೆಸುವಂತೆ ಮಾಡಬೇಕಿದೆ. ಜನರಿಗೆ ಭದ್ರತೆ ಮತ್ತು ಸುರಕ್ಷಿತ ವಾತಾವರಣ ನಿರ್ಮಿಸಬೇಕಿದೆ. ವಿಶ್ವಕ್ಕೆ ಶಾಂತಿ ಸಂದೇಶ ನೀಡೋಣ ಎಂದರು.
ಜಾಗತಿಕ ಆರ್ಥಿಕ ಬೆಳವಣಿಗೆಗೆ ವಿಶ್ವದಲ್ಲೇ ಅತಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಭಾರತದ ಇಂಧನ ಭದ್ರತೆ ಕೂಡ ಬಹು ಮುಖ್ಯ. ಇಂಧನ ಮಾರುಕಟ್ಟೆಯ ಪೂರೈಕೆ ಮೇಲಿನ ನಿರ್ಬಂಧಗಳನ್ನು ನಾವು ಪ್ರೋತ್ಸಾಹಿಸಬಾರದು. ಶುದ್ಧ ಇಂಧನ ಮತ್ತು ಪರಿಸರದ ವಿಚಾರದಲ್ಲಿ ಭಾರತ ಬದ್ಧವಾಗಿದೆ ಎಂದು ಅವರು ಹೇಳಿದರು.
ಇಂದಿನ ರಸಗೊಬ್ಬರ ಕೊರತೆಯೇ ನಾಳಿನ ಆಹಾರ ಬಿಕ್ಕಟ್ಟಿಗೆ ದಾರಿ. ಇದಕ್ಕೆ ಜಗತ್ತು ಇನ್ನೂ ಪರಿಹಾರ ಕಂಡುಕೊಂಡಿಲ್ಲ. ರಸಗೊಬ್ಬರ ಮತ್ತು ಆಹಾರ ಧಾನ್ಯಗಳ ಪೂರೈಕೆಗೆ ಅಡ್ಡಿಯಾಗದಂತೆ ನೋಡಿಕೊಳ್ಳಲು ನಾವೆಲ್ಲ ಜತೆಯಾಗಿ ಕಾರ್ಯನಿರ್ವಹಿಸಬೇಕಿದೆ ಎಂದರು.
ಭಾರತದಲ್ಲಿ ಆಹಾರ ಭದ್ರತೆಗಾಗಿ ನಾವು ನೈಸರ್ಗಿಕ ಕೃಷಿ, ಪೌಷ್ಟಿಕಾಂಶಯುಕ್ತ ಆಹಾರ ಬೆಳೆಗಳು, ರಾಗಿಯಂಥ ಸಾಂಪ್ರದಾಯಿಕ ಬೆಳೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದೇವೆ. ರಾಗಿಯಿಂದ ಜಾಗತಿಕ ಮಟ್ಟದಲ್ಲಿ ಅಪೌಷ್ಟಿಕತೆ ಹಾಗೂ ಹಸಿವನ್ನು ಹೋಗಲಾಡಿಸಲು ಸಾಧ್ಯವಿದೆ ಎಂದು ಮೋದಿ ಹೇಳಿದರು.
2030ರ ವೇಳೆಗೆ ನಾವು ಬಳಸುವ ಶೇಕಡಾ 50ರಷ್ಟು ವಿದ್ಯುತ್ ನವೀಕರಿಸಬಹುದಾದ ಇಂಧನ ಮೂಲಗಳಿಂದ ತಯಾರಾಗಲಿದೆ. ಇಂಧನ ಪರಿವರ್ತನೆಗಾಗಿ ಅಭಿವೃದ್ಧಿ ಹೊಂದುತ್ತಿರುವ ದೇಶಗಳಿಗೆ ಸಮಯಕ್ಕೆ ಸರಿಯಾಗಿ ಉತ್ತಮ ತಂತ್ರಜ್ಞಾನ ಮತ್ತು ಹಣಕಾಸಿನ ಲಭ್ಯತೆ ಸಿಗಬೇಕಾದ್ದು ಅತೀ ಅಗತ್ಯ ಎಂದು ಪ್ರಧಾನಿ ಪ್ರತಿಪಾದಿಸಿದರು.
At the @g20org Summit this morning, spoke at the session on Food and Energy Security. Highlighted India’s efforts to further food security for our citizens. Also spoke about the need to ensure adequate supply chains as far as food and fertilisers are concerned. pic.twitter.com/KmXkeVltQo
— Narendra Modi (@narendramodi) November 15, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.