ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಲೇಖನವೊಂದರಲ್ಲಿ ಹವಾಮಾನ ಕ್ರಿಯೆಗೆ ಭಾರತ ನೀಡಿರುವ ಕೊಡುಗೆಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಪ್ರತಿಯೊಬ್ಬರೂ ಪ್ರಕೃತಿಯೊಂದಿಗೆ ಶಾಂತಿಯನ್ನು ಹೊಂದಬೇಕು, ನಮ್ಮ ಇಂಗಾಲದ ಹೆಜ್ಜೆಗುರುತುಗಳನ್ನು ಕಡಿಮೆ ಮಾಡಬೇಕು ಮತ್ತು ಸುಸ್ಥಿರ ಸಮಾಜ ಮತ್ತು ಆರ್ಥಿಕತೆಗೆ ಹೊಂದಿಕೊಳ್ಳುವ ಜೀವನಶೈಲಿಯನ್ನು ಹೊಂದಬೇಕು ಎಂದು ಗುಟೆರೆಸ್ ಲೇಖನದಲ್ಲಿ ಬರೆದಿದ್ದಾರೆ.
ಪ್ರಮುಖ ರಾಷ್ಟ್ರೀಯ ಮತ್ತು ಜಾಗತಿಕ ಉಪಕ್ರಮ ‘ಮಿಷನ್ ಲೈಫ್’ (ಪರಿಸರಕ್ಕಾಗಿ ಜೀವನಶೈಲಿ) ಪ್ರಾರಂಭಿಸಲು ಅಕ್ಟೋಬರ್ನಲ್ಲಿ ಭಾರತಕ್ಕೆ ಬಂದ ಗುಟೆರಸ್ ಅವರು ಆ ಉಪಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಈ ಉಪಕ್ರಮವು ಹವಮಾನ ಕ್ರಿಯೆಗೆ ಕೊಡುಗೆ ನೀಡಲು ಪ್ರಪಂಚದಾದ್ಯಂತದ ನಾಗರಿಕರನ್ನು ಸಜ್ಜುಗೊಳಿಸುತ್ತದೆ ಎಂದು ಬರೆದಿದ್ದಾರೆ.
ಹವಾಮಾನ ಬದಲಾವಣೆಯ ಬಗ್ಗೆ ಮಾತನಾಡಿದ ಗುಟೆರಸ್ ಅವರು, ನಾವು ಪ್ರಸ್ತುತ ಭೂಮಿಯಲ್ಲಿ ಉತ್ಪಾದಿಸುವುದಕ್ಕಿಂತ ಹೆಚ್ಚಿನದನ್ನು ಸೇವಿಸುತ್ತಿದ್ದೇವೆ. ನಾವು ಹೇಗೆ ವರ್ತಿಸುತ್ತೇವೆ, ಏನು ತಿನ್ನುತ್ತೇವೆ ಮತ್ತು ವಸ್ತುಗಳನ್ನು ಮರುಬಳಕೆ ಮಾಡುವುದು ಮತ್ತು ತ್ಯಾಜ್ಯವನ್ನು ಹೇಗೆ ತಪ್ಪಿಸಬಹುದು ಎಂಬುದರ ಕುರಿತು ಯೋಚಿಸಬೇಕು ಎಂದು ಹೇಳಿದ್ದಾರೆ.
ಭಾರತಕ್ಕೆ ಅವರ ಅಧಿಕೃತ ಭೇಟಿಯ ಸಂದರ್ಭದಲ್ಲಿಗುಟೆರಸ್ ಅವರು ಗುಜರಾತ್ನಲ್ಲಿರುವ ಭಾರತದ ಮೊದಲ 24×7 ಸೌರಶಕ್ತಿ ಚಾಲಿತ ಗ್ರಾಮ ಮೊಧೇರಾಕ್ಕೆ ಭೇಟಿ ನೀಡಿದ್ದರು. ಯೋಜನೆಯ ಪ್ರಯೋಜನಗಳನ್ನು ಉಲ್ಲೇಖಿಸಿರುವ ಅವರು, 2030 ರ ವೇಳೆಗೆ 500 GW ನವೀಕರಿಸಬಹುದಾದ ಇಂಧನ ಉತ್ಪಾದನೆಯನ್ನು ಸಾಧಿಸುವ ಬದ್ಧತೆಯನ್ನು ಒಳಗೊಂಡಿರುವ ಭಾರತದ ದೈತ್ಯ ಯೋಜನೆಯು ಹವಾಮಾನ ಕ್ರಿಯೆಗೆ ಬಹಳ ಪ್ರಮುಖ ಕೊಡುಗೆಯಾಗಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.