ಅಹ್ಮದಾಬಾದ್: ಗುಜರಾತಿನಲ್ಲಿ ಆಡಳಿತಾರೂಢ ಬಿಜೆಪಿ 7ನೇ ಬಾರಿಗೆ ರಾಜ್ಯದಲ್ಲಿ ಅಧಿಕಾರ ಉಳಿಸಿಕೊಳ್ಳಲು ಸಜ್ಜಾಗಿದೆ. ಡಿಸೆಂಬರ್ 12ರಂದು ನೂತನ ಬಿಜೆಪಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಇಂದು ಗಾಂಧಿನಗರದಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸಿಆರ್ ಪಾಟೀಲ್ ಈ ವಿಷಯವನ್ನು ಪ್ರಕಟಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಪಕ್ಷದ ಇತರ ಮುಖಂಡರು, ಬಿಜೆಪಿಯಲ್ಲಿ ನಂಬಿಕೆ ಇಟ್ಟಿರುವ ರಾಜ್ಯದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.
ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸೇರಿದಂತೆ ಬಿಜೆಪಿಯ ಎಲ್ಲಾ ಪ್ರಮುಖ ಮುಖಗಳು, ಹರ್ಷ ಸಂಘವಿ, ಕನುಭಾಯಿ ದೇಸಾಯಿ, ಮನೀಶಾ ಬೆನ್ ವಕೀಲ್ ಮತ್ತು ಋಷಿಕೇಶ್ ಪಟೇಲ್ ಸೇರಿದಂತೆ ಅವರ ಹಲವಾರು ಸಚಿವರು ಸೇರಿದಂತೆ ಪಕ್ಷದ ಯುವ ನಾಯಕರಾದ ಅಲ್ಪೇಶ್ ಠಾಕೋರ್ ಮತ್ತು ಹಾರ್ದಿಕ್ ಪಟೇಲ್ ತಮ್ಮ ತಮ್ಮ ಸ್ಥಾನಗಳಿಂದ ಗೆದ್ದಿದ್ದಾರೆ.
ಜಾಮ್ನಗರ ಉತ್ತರ ಕ್ಷೇತ್ರದಲ್ಲಿ ಬಿಜೆಪಿಯ ರಿವಾಬ ಜಡೇಜಾ 50456 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ನಿಂದ ಶೈಲೇಶ್ ಪರ್ಮಾರ್, ಅರ್ಜುನ್ ಮೊರ್ವಾಧಿಯಾ ಮತ್ತು ಇಮ್ರಾನ್ ಖೆಡಾವಾಲಾ ತಮ್ಮ ಸ್ಥಾನಗಳನ್ನು ಗೆದ್ದಿದ್ದಾರೆ.
ಗಾಂಧಿನಗರದಲ್ಲಿರುವ ಬಿಜೆಪಿಯ ರಾಜ್ಯ ಪ್ರಧಾನ ಕಚೇರಿ ‘ಕಮಲಂ’ನಲ್ಲಿ ಈಗಾಗಲೇ ಸಂಭ್ರಮಾಚರಣೆ ಆರಂಭವಾಗಿದೆ. ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭೂತಪೂರ್ವ ಸಾಧನೆಯನ್ನು ಆಚರಿಸಲು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿಗಳನ್ನು ಸಿಡಿಸುತ್ತಿದ್ದಾರೆ, ಘೋಷಣೆಗಳನ್ನು ಹಾಕುತ್ತಿದ್ದಾರೆ ಮತ್ತು ಸಿಹಿ ಹಂಚುತ್ತಿದ್ದಾರೆ.
2017ರಲ್ಲಿ 182 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 99 ಸ್ಥಾನ ಗಳಿಸಿದ್ದರೆ ಕಾಂಗ್ರೆಸ್ 77 ಸ್ಥಾನ ಗಳಿಸಿತ್ತು. 1995ರಿಂದ ಬಿಜೆಪಿ ಅಧಿಕಾರದಲ್ಲಿದೆ.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಪ್ರಚಂಡ ಜಯ ತಂದುಕೊಟ್ಟ ಗುಜರಾತ್ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ತಿಳಿಸಿದ್ದಾರೆ. ಅಭೂತಪೂರ್ವ ಚುನಾವಣಾ ಫಲಿತಾಂಶಗಳನ್ನು ನೋಡಿ ಭಾವುಕನಾಗಿರುವುದಾಗಿ ಹೇಳಿದ್ದಾರೆ. ಪ್ರತಿಯೊಬ್ಬ ಕಾರ್ಯಕರ್ತರು ಚಾಂಪಿಯನ್ ಆಗಿದ್ದಾರೆ ಮತ್ತು ಅವರ ಅಸಾಧಾರಣ ಪರಿಶ್ರಮವಿಲ್ಲದೆ ಈ ಐತಿಹಾಸಿಕ ಗೆಲುವು ಎಂದಿಗೂ ಸಾಧ್ಯವಿಲ್ಲ ಎಂದಿದ್ದಾರೆ.
To all hardworking @BJP4Gujarat Karyakartas I want to say – each of you is a champion! This historic win would never be possible without the exceptional hardwork of our Karyakartas, who are the real strength of our Party.
— Narendra Modi (@narendramodi) December 8, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.